Featured

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ದ ಕಾನೂನು ಕ್ರಮಕ್ಕೆ ಜಿಲ್ಲಾಡಳಿದಿಂದ ದೂರು : FIR ದಾಖಲು – Vishwanews24

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ದ ಕಾನೂನು ಕ್ರಮಕ್ಕೆ ಜಿಲ್ಲಾಡಳಿದಿಂದ ದೂರು : FIR ದಾಖಲು

ಉಡುಪಿ,:  ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ  ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೆÃಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ  ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ 5-7-2022 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು 4-7-2022 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಸಿರುತ್ತಾರೆ. ಆದರೆ ಅಂದು ಸಂಜೆ ಹೆಬ್ರಿ ತಾಲೂಕಿನ ವ್ಯಾಪ್ತಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಡಳಿದಿಂದ ರಜೆ ಘೋಷಿಸಲಾಗಿತ್ತು.

ಇಂತಹ ಸಮಾಜಘಾತುಕ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿ , ತನಿಖೆ ನಡೆಸಿ , ಕಾನೂನಿನಡಿ ಕ್ರಮ ಕೈಗೊಳ್ಳಲು ಜಿಲ್ಲಾ ಸೆನ್ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದ್ದು, ಎಫ್.ಐ.ಆರ್. ದಾಖಲಾಗಿದೆ. ಈ ಪ್ರಕರಣ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳಿದ್ದಲ್ಲಿ ಮಾಹಿತಿಯನ್ನು ಸೆನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದೂ.ಸಂ.9480805410 ಗೆ ನೀಡುವಂತೆ ಕೋರಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago