ಉಡುಪಿ,: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೆÃಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು ಘೋಷಿಸಿ, ಆದೇಶಿಸುತ್ತಿರುವ ಆದೇಶ ಪ್ರತಿಯಲ್ಲಿನ ದಿನಾಂಕಗಳನ್ನು ತಿದ್ದುಪಡಿ ಮಾಡಿ , ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ದ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಗರದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಜಿಲ್ಲಾ ದಂಡಾಧಿಕಾರಿಗಳು ದಿನಾಂಕ.1-7-2022 ರಂದು ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ಹೆಚ್ಚಳವಾಗಿರುವ ಕಾರಣ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಆಧರಿಸಿ ರಜೆಯನ್ನು ಘೋಷಿಸಿ 2022 ರ ಜೂನ್ 30 ರಂದು ಸಂಜೆ ಹೊರಡಿಸಿದ್ದ ಆದೇಶದ ಪ್ರತಿಯನ್ನು ಸಮಾಜದಲ್ಲಿನ ಕೆಲವು ಕಿಡಗೇಡಿಗಳು ಆದೇಶದ ದಿನಾಂಕವನ್ನು ಡಿಜಿಟಲೀಕರಣದಿಂದ ತಿದ್ದುಪಡಿ ಮಾಡಿ 5-7-2022 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಆದೇಶದ ಕಾನೂನುಬಾಹಿರ ನಕಲಿ ತಿದ್ದುಪಡಿ ಪತ್ರವನ್ನು 4-7-2022 ರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಪ್ರಸರಣಗೊಳಿಸಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿಸಿರುತ್ತಾರೆ. ಆದರೆ ಅಂದು ಸಂಜೆ ಹೆಬ್ರಿ ತಾಲೂಕಿನ ವ್ಯಾಪ್ತಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಡಳಿದಿಂದ ರಜೆ ಘೋಷಿಸಲಾಗಿತ್ತು.
ಇಂತಹ ಸಮಾಜಘಾತುಕ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿ , ತನಿಖೆ ನಡೆಸಿ , ಕಾನೂನಿನಡಿ ಕ್ರಮ ಕೈಗೊಳ್ಳಲು ಜಿಲ್ಲಾ ಸೆನ್ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದ್ದು, ಎಫ್.ಐ.ಆರ್. ದಾಖಲಾಗಿದೆ. ಈ ಪ್ರಕರಣ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳಿದ್ದಲ್ಲಿ ಮಾಹಿತಿಯನ್ನು ಸೆನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದೂ.ಸಂ.9480805410 ಗೆ ನೀಡುವಂತೆ ಕೋರಿದೆ.
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…