Featured

ಉಡುಪಿ : ಸಾಮೂಹಿಕ ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ 20 ವರ್ಷ ಕಠಿನ ಶಿಕ್ಷೆ -Vishwanews24

ಉಡುಪಿ: ಬಾಲಕಿ ಮೇಲೆ 2016ರಲ್ಲಿ ನಗರದ ಹೊರವಲಯದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಜೋಶಿ 20 ವರ್ಷ ಕಠಿಣ ಶಿಕ್ಷೆ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.

ನವೆಂಬರ್ 20ರಂದು ಜಿಲ್ಲಾ ವಿಶೇಷ ನ್ಯಾಯಾಲಯವು ಆರೋಪಿಗಳಾಗಿದ್ದ ಪದಮ್‌ ಸಿಂಗ್‌ ಸೇನ್‌ ಮತ್ತು ಮುಕೇಶ್ ಸೇನ್‌ನನ್ನು ಅಪರಾಧಿಗಳೆಂದು ಸಾಬೀತು ಪಡಿಸಿತ್ತು.

ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷ ಕಠಿನ ಜೈಲು ಶಿಕ್ಷೆ, 20 ಸಾವಿರ ರೂ. ದಂಡ, ತಪ್ಪಿದಲ್ಲಿ 1 ವರ್ಷ ಸಾದಾ ಸಜೆ, ಅಪಹರಣಕ್ಕೆ 10 ವರ್ಷ ಜೈಲು ಶಿಕ್ಷೆ, 15 ಸಾವಿರ ರೂ. ದಂಡ, ತಪ್ಪಿದಲ್ಲಿ 6 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ, ಜೀವ ಬೆದರಿಕೆಗೆ 1 ವರ್ಷ ಜೈಲು ಶಿಕ್ಷೆ, ಐದು ಸಾವಿರ ರೂ. ದಂಡ, ತಪ್ಪಿದಲ್ಲಿ 3 ತಿಂಗಳು ಜೈಲು, ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿ 20 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ, ತಪ್ಪಿದಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆ ಬಾಲಕಿಯ ಪರ ಜಿಲ್ಲಾ ಪೊಕ್ಸೋ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದ ಮಂಡಿಸಿದ್ದರು.

ಪದಮ್‌ ಸಿಂಗ್‌ ಸೇನಿ, ಮುಕೇಶ್‌ ಸೇನಿ 2016ರ ಜು.8ರಂದು ರಾತ್ರಿ ಸಂತ್ರಸ್ತೆಯ ತಂದೆ ಕೆಲಸದ ನಿಮಿತ್ತ ತೆರಳಿದ್ದಾಗ, ಬಾಲಕಿಯ ಮನೆಗೆ ಆಗಮಿಸಿ ಬಾಲಕಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಬಡಗಬೆಟ್ಟಿನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಅತ್ಯಾಚಾರ ಎಸಗಿದ್ದರು. ಬಳಿಕ ಜೀವ ಬೆದರಿಕೆ ಒಡ್ಡಿ ಮನೆಯ ಬಳಿ ಬಿಟ್ಟುಹೋಗಿದ್ದರು. ಈ ಬಗ್ಗೆ 2016 ಜು.10ರಂದು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ ಅಂದಿನ ತನಿಖಾಧಿಕಾರಿಗಳಾದ ಉಡುಪಿ ವೃತ್ತ ನಿರೀಕ್ಷಕ ಶ್ರೀಕಾಂತ್‌ ಕೆ. ಮತ್ತು ಜೈಶಂಕರ್‌ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ 2016ರ ಸೆ. 20ರಂದು ನ್ಯಾಯಾಲಯಕ್ಕೆ ದೋಷಾ ರೋಪ ಸಲ್ಲಿಸಿದ್ದರು. ಅಭಿಯೋಜನೆ ಪರವಾಗಿ 34 ಸಾಕ್ಷಿಗಳ ಪೈಕಿ 21 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆ ಪಡೆದುಕೊಳ್ಳಲಾಗಿತ್ತು.

ಬಾಲಕಿಯ ಪರ ಜಿಲ್ಲಾ ಪೋಕ್ಸೋ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದ ಮಂಡನೆ ಮಾಡಿದ್ದರು. ಕಳೆದ ವರ್ಷ ಇದೇ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಜಿಲ್ಲಾ ವಿಶೇಷ ಸರಕಾರಿ ಅಭಿಯೋಜಕರ ಮೇಲೆ ಆರೋಪಿ ತನ್ನ ಶೂ ಎಸೆದಿದ್ದ ಹಿನ್ನಲೆಯಲ್ಲಿ ಮಂಗಳವಾರ ನ್ಯಾಯಾಲಯದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

2 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

2 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

3 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

3 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

3 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

3 hours ago