ಉಡುಪಿ: ಬಾಲಕಿ ಮೇಲೆ 2016ರಲ್ಲಿ ನಗರದ ಹೊರವಲಯದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಜೋಶಿ 20 ವರ್ಷ ಕಠಿಣ ಶಿಕ್ಷೆ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.
ನವೆಂಬರ್ 20ರಂದು ಜಿಲ್ಲಾ ವಿಶೇಷ ನ್ಯಾಯಾಲಯವು ಆರೋಪಿಗಳಾಗಿದ್ದ ಪದಮ್ ಸಿಂಗ್ ಸೇನ್ ಮತ್ತು ಮುಕೇಶ್ ಸೇನ್ನನ್ನು ಅಪರಾಧಿಗಳೆಂದು ಸಾಬೀತು ಪಡಿಸಿತ್ತು.
ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷ ಕಠಿನ ಜೈಲು ಶಿಕ್ಷೆ, 20 ಸಾವಿರ ರೂ. ದಂಡ, ತಪ್ಪಿದಲ್ಲಿ 1 ವರ್ಷ ಸಾದಾ ಸಜೆ, ಅಪಹರಣಕ್ಕೆ 10 ವರ್ಷ ಜೈಲು ಶಿಕ್ಷೆ, 15 ಸಾವಿರ ರೂ. ದಂಡ, ತಪ್ಪಿದಲ್ಲಿ 6 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ, ಜೀವ ಬೆದರಿಕೆಗೆ 1 ವರ್ಷ ಜೈಲು ಶಿಕ್ಷೆ, ಐದು ಸಾವಿರ ರೂ. ದಂಡ, ತಪ್ಪಿದಲ್ಲಿ 3 ತಿಂಗಳು ಜೈಲು, ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿ 20 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ, ತಪ್ಪಿದಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆ ಬಾಲಕಿಯ ಪರ ಜಿಲ್ಲಾ ಪೊಕ್ಸೋ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದ ಮಂಡಿಸಿದ್ದರು.
ಪದಮ್ ಸಿಂಗ್ ಸೇನಿ, ಮುಕೇಶ್ ಸೇನಿ 2016ರ ಜು.8ರಂದು ರಾತ್ರಿ ಸಂತ್ರಸ್ತೆಯ ತಂದೆ ಕೆಲಸದ ನಿಮಿತ್ತ ತೆರಳಿದ್ದಾಗ, ಬಾಲಕಿಯ ಮನೆಗೆ ಆಗಮಿಸಿ ಬಾಲಕಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಬಡಗಬೆಟ್ಟಿನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಅತ್ಯಾಚಾರ ಎಸಗಿದ್ದರು. ಬಳಿಕ ಜೀವ ಬೆದರಿಕೆ ಒಡ್ಡಿ ಮನೆಯ ಬಳಿ ಬಿಟ್ಟುಹೋಗಿದ್ದರು. ಈ ಬಗ್ಗೆ 2016 ಜು.10ರಂದು ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿ ಅಂದಿನ ತನಿಖಾಧಿಕಾರಿಗಳಾದ ಉಡುಪಿ ವೃತ್ತ ನಿರೀಕ್ಷಕ ಶ್ರೀಕಾಂತ್ ಕೆ. ಮತ್ತು ಜೈಶಂಕರ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ 2016ರ ಸೆ. 20ರಂದು ನ್ಯಾಯಾಲಯಕ್ಕೆ ದೋಷಾ ರೋಪ ಸಲ್ಲಿಸಿದ್ದರು. ಅಭಿಯೋಜನೆ ಪರವಾಗಿ 34 ಸಾಕ್ಷಿಗಳ ಪೈಕಿ 21 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆ ಪಡೆದುಕೊಳ್ಳಲಾಗಿತ್ತು.
ಬಾಲಕಿಯ ಪರ ಜಿಲ್ಲಾ ಪೋಕ್ಸೋ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದ ಮಂಡನೆ ಮಾಡಿದ್ದರು. ಕಳೆದ ವರ್ಷ ಇದೇ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಜಿಲ್ಲಾ ವಿಶೇಷ ಸರಕಾರಿ ಅಭಿಯೋಜಕರ ಮೇಲೆ ಆರೋಪಿ ತನ್ನ ಶೂ ಎಸೆದಿದ್ದ ಹಿನ್ನಲೆಯಲ್ಲಿ ಮಂಗಳವಾರ ನ್ಯಾಯಾಲಯದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…