Featured

ಉಡುಪಿ:  ಸಾರ್ವಜನಿಕರಿಗೆ ಕಂದಾಯ ಸೇವೆಗಳು ಸಮರ್ಪಕವಾಗಿ ತಲುಪಬೇಕು : ಶಾಸಕ ರಘುಪತಿ ಭಟ್ – Vishwanews24

ಉಡುಪಿ:  ಸಾರ್ವಜನಿಕರಿಗೆ ಕಂದಾಯ ಸೇವೆಗಳು ಸಮರ್ಪಕವಾಗಿ ತಲುಪಬೇಕು : ಶಾಸಕ ರಘುಪತಿ ಭಟ್ – Vishwanews24

ಉಡುಪಿ:  ಸಾರ್ವಜನಿಕರಿಗೆ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಸೇವೆಗಳನ್ನು ಸಮರ್ಪಕವಾಗಿ, ಮಧ್ಯವರ್ತಿಗಳ ಹಾವಳಿ ಇಲ್ಲದೆ , ಸಕಾಲದಲ್ಲಿ ಒದಗಿಸುವ ಮೂಲಕ, ಕಂದಾಯ ಸಮಸ್ಯೆಗಳನ್ನು ಸಮರ್ಪಕ ರೀತಿಯಲ್ಲಿ ಬಗೆಹರಿಸಲು, ಅಧಿಕಾರಿಗಳು ಪ್ರಾಮಾಣಿಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಅವರು ಇಂದು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಯಡಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ರೈತರ ಮನೆಗಳಿಗೆ, ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತೆರಳಿ ವಿತರಿಸಿ, ನಂತರ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ರೂಪಿಸಿರುವ ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯು ಸಾರ್ವಜನಿಕರಿಗೆ ಬಹುಪಯೋಗಿ ಮತ್ತು ದೂರದೃಷ್ಠಿ ಹೊಂದಿರುವ ಜನಪರ ಕಾರ್ಯಕ್ರಮವಾಗಿದ್ದು, ಹಲವು ವರ್ಷಗಳಿಂದ ಕಂದಾಯ ಇಲಾಖೆಯಿಂದ, ತಮಗೆ ಅಗತ್ಯವಿರುವ ದಾಖಲೆಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡಿರುವ ರೈತರಿಗೆ ಅವರ ಮನೆ ಬಾಗಲಿಗೆ ತೆರಳಿ , ಅವರಿಗೆ ಸಂಬAದಿಸಿದ ಪ್ರಮುಖ ದಾಖಲೆಗಳನ್ನು ಉಚಿತವಾಗಿ ನೀಡುತ್ತಿರುವುದು ದೇಶದಲ್ಲೇ ಪ್ರಥಮವಾಗಿದೆ ಎಂದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡುವುದರ ಮೂಲಕ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೇವೆಗಳನ್ನು ಉತ್ತಮ ರೀತಿಯಲ್ಲಿ ತಲುಪಿಸಲು ಸಾಧ್ಯವಾಗಲಿದೆ, ಉಡುಪಿ ವಿಧಾನಸಭಾ ವ್ಯಾಪ್ತಿಯಲ್ಲಿ ಕಡತ ವಿಲೇವಾರಿ ಕಾರ್ಯಕ್ರಮ ಅಯೋಜಿಸುವ ಮೂಲಕ ಹಲವು ವರ್ಷಗಳಿಂದ ಬಾಕಿ ಇರುವ ಸಾರ್ವಜನಿಕರ ಕಡತಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಲಾಗುವುದು ಎಂದರು.

 

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಅಗತ್ಯ ದಾಖಲೆಗಳನ್ನು ಪಡೆಯಲು ಸಾರ್ವಜನಿಕರು ನಿಗಧಿತ ಶುಲ್ಕ ಪಾವತಿ ಮತ್ತು ಕಾಯುವ ಪರಿಸ್ಥಿತಿ ಇತ್ತು, ಆದರೆ ಈ ಯೋಜನೆಯ ಮೂಲಕ ರೈತರ ಮನೆ ಬಾಗಿಲಿಗೆ ಪಹಣಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,ಅಟ್ಲಾಸ್/ ಹಿಸ್ಸಾ ಸ್ಕೆಚ್ ಗಳನ್ನು ಉಚಿತವಾಗಿ ತಲುಪಿಸಲಾಗುತ್ತಿದೆ. ಈಗ ನೀಡಲಾಗುತ್ತಿರುವ ದಾಖಲಾತಿಗಳಲ್ಲಿ ತಪ್ಪು ಗಳಿದ್ದಲ್ಲಿ ಸರಿಪಡಿಸಿಕೊಳ್ಳಲು ಸಹ ಅವಕಾಶವಿದೆ. ಬಹುತೇಕ ಸಾರ್ವಜನಿಕರು ತಮಗೆ ಸಂಬAದಿಸಿದ ಕಂದಾಯ ದಾಖಲೆಗಳು ಇರುವ ಬಗ್ಗೆ ಮಾಹಿತಿ ಇಲ್ಲದೇ, ವ್ಯಾಜ್ಯದ ಸಂದರ್ಭದಲ್ಲಿ ನ್ಯಾಯಾಲಯಗಳಲ್ಲಿ ತೊಂದರೆಗೀಡಾಗಬೇಕಾದ ಪರಿಸ್ಥಿತಿಗಳಿದ್ದು, ಈ ಯೋಜನೆಯ ಮೂಲಕ ಅತ್ಯವಶ್ಯಕ ಅಗತ್ಯ ದಾಖಲೆಗಳನ್ನು ಉಚಿತವಾಗಿ, ಮನೆ ಬಾಗಿಲಿನಲ್ಲಿಯೇ ಪಡೆಯಲು ಸಾಧ್ಯವಾಗಿದ್ದು, ಜಿಲ್ಲೆಯ ೨೬೭ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ದಾಖಲೆಗಳನ್ನು ವಿತರಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತೆಂಕನಿಡಿಯೂರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಸುರೇಶ್, ಉಪಾಧ್ಯಕ್ಷ ಅರುಣ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.ಉಡುಪಿ ತಹಸೀಲ್ದಾರ್ ಅರ್ಚನಾ ಭಟ್ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ವಂದಿಸಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

20 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

20 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

21 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

21 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

21 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago