ಉಡುಪಿ: ಕಾರ್ಯಕ್ರಮವೊಂದರಲ್ಲಿ ಡಿಕೆಶಿ ಅವರ ಪಠ್ಯ ಪುಸ್ತಕವನ್ನು ಹರಿದಿರುವ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಂಡಿಸಿದ್ದಾರೆ.
ರಾಜ್ಯ ಸರ್ಕಾರ ಯೋಚನೆ ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು, ಟೀಕೆ ಟಿಪ್ಪಣಿ ಎಲ್ಲದಕ್ಕೂ ಸರ್ಕಾರ ಹಾಗೂ ನಾವೆಲ್ಲ ಉತ್ತರ ಕೊಡುತ್ತಿದ್ದೇವೆ, ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿಕೆಶಿ ಅವರು ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಉಂಟುಮಾಡಿದೆ. ಡಿಕೆಶಿಯವರು ತಮ್ಮ ವರ್ತನೆ ಬಗ್ಗೆ ಪುನರಾಲೋಚನೆ ಮಾಡಬೇಕು. ಪುಸ್ತಕ ಹರಿದಾಕಿದ ವರ್ತನೆಗೆ ವಿಷಾದ ವ್ಯಕ್ತಪಡಿಸಬೇಕು, ಪ್ರತಿರೋಧಕ್ಕೆ ಸದನದ ಒಳಗೆ ಹಾಗೂ ಹೊರಗೆ ಅವಕಾಶ ಇದೆ. ಹೀಗೆ ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ, ಡಿಕೆಶಿ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ…
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ…
ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ…
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ…
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…