ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯ ಸೇವಾ ಶುಲ್ಕ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ/ಜುಲ್ಮಾನೆಗಳನ್ನು ವಿಧಿಸಲಾಗುತ್ತಿದ್ದು, ಘನತ್ಯಾಜ್ಯ ವಸ್ತು ನಿರ್ವಹಣೆ ಮತ್ತು ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂಲದಲ್ಲಿಯೇ ಅಂದರೆ ಮನೆ ಮನೆಯಲ್ಲಿ, ವಾಣಿಜ್ಯ ಮಳಿಗೆಯಲ್ಲಿ ಹಾಗೂ ಕಸ ಉತ್ಪಾದನೆ ಮಾಡುವವರು ಘನ ತ್ಯಾಜ್ಯ ವಸ್ತುಗಳನ್ನು ಹಸಿಕಸ, ಒಣಕಸ ಮತ್ತು ಅಪಾಯಕಾರಿ ಕಸವನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ಕಸ ಸಂಗ್ರಹಿಸುವ ನಗರಸಭೆಯ ವಾಹನಗಳಿಗೆ ನೀಡುವುದು ಕಡ್ಡಾಯವಾಗಿರುತ್ತದೆ.
ಇದನ್ನೂ ಓದಿ :ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಯಾವುದೇ ಸಾರ್ವಜನಿಕ ಸ್ಥಳದಲ್ಲಿ, ಖಾಸಗಿ ಪ್ರದೇಶದಲ್ಲಿ ಕಸ ಹಾಕುವುದು/ ಕಸ ಎಸೆಯುವುದನ್ನು ನಿಷೇಧಿಸಲಾಗಿದ್ದು, ನಗರಸಭೆಯು ಸ್ವಚ್ಚತೆ ಕಾಪಾಡುವಲ್ಲಿ ಮುತುವರ್ಜಿ ವಹಿಸಿ ಸ್ವಚ್ಛ ನಗರವಾಗಲು ನಗರದಲ್ಲಿನ ತ್ಯಾಜ್ಯ ಬೀಳುವ ಪ್ರದೇಶದಲ್ಲಿ ರಾತ್ರಿ ಮತ್ತು ಮುಂಜಾನೆ ಕಾವಲು ನಡೆಸಿ ತ್ಯಾಜ್ಯ ಹಾಕುವವರನ್ನು ಪತ್ತೆ ಹಚ್ಚಿ ದಂಡ ಹಾಕಲಾಗುತ್ತಿದ್ದು, ಈವರೆಗೆ ಒಟ್ಟು 3,22,400 ರೂ. ದಂಡ ವಸೂಲಿ ಮಾಡಲಾಗಿರುತ್ತದೆ.
ಇದನ್ನೂ ಓದಿ :ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಮಾರ್ಚ್ 3 ರಂದು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಮಿಳುನಾಡಿನಿಂದ ಬಂದ ವಾಹನವು ತ್ಯಾಜ್ಯವನ್ನು ಸುರಿಯುತ್ತಿರುವುದನ್ನು ಪತ್ತೆ ಹಚ್ಚಿ 10,000 ರೂ. ದಂಡ ಹಾಗೂ ಮಾರ್ಚ್ 15 ರಂದು ಕಾರಿನಲ್ಲಿ ಬಂದು ತ್ಯಾಜ್ಯ ಎಸೆದವರಿಗೆ 5,000 ರೂ ದಂಡವನ್ನು ವಿಧಿಸಲಾಗಿರುತ್ತದೆ.
ಸಾರ್ವಜನಿಕರು, ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಹಾಕುವುದು ಕಂಡುಬAದಲ್ಲಿ ಇನ್ನು ಮುಂದೆ 25,000 ರೂ. ದಂಡವನ್ನು ವಿಧಿಸಿ ಕಠಿಣ ಕ್ರಮವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ :ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…