ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯ ಸೇವಾ ಶುಲ್ಕ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ / ಜುಲ್ಮಾನೆಗಳನ್ನು ವಿಧಿಸಲಾಗುತ್ತಿದ್ದು, ಮನೆ, ವಾಣಿಜ್ಯ ಮಳಿಗೆ ಹಾಗೂ ಕಸ ಉತ್ಪಾದನೆ ಮಾಡುವವರು ಘನ ತ್ಯಾಜ್ಯ ವಸ್ತುಗಳನ್ನು ಹಸಿಕಸ, ಒಣಕಸ ಮತ್ತು ಅಪಾಯಕಾರಿ ಕಸವನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ಕಸ ಸಂಗ್ರಹಿಸುವ ನಗರಸಭೆಯ ವಾಹನಕ್ಕೆ ನೀಡುವುದು ಕಡ್ಡಾಯವಾಗಿರುತ್ತದೆ.
ಸಾರ್ವಜನಿಕ ಸ್ಥಳದಲ್ಲಿ ಹಾಗೂ ಖಾಸಗಿ ಪ್ರದೇಶದಲ್ಲಿ ಕಸ ಹಾಕುವುದು/ ಕಸ ಎಸೆಯುವುದನ್ನು ನಿಷೇಧಿಸಲಾಗಿದ್ದು, ನಗರಸಭೆಯು ಸ್ವಚ್ಛತೆ ಕಾಪಾಡುವಲ್ಲಿ ಮುತುವರ್ಜಿ ವಹಸಿ ಸ್ವಚ್ಚನಗರವನ್ನಾಗಿಸಲು ನಗರದಲ್ಲಿನ ತ್ಯಾಜ್ಯ ಬೀಳುವ ಪ್ರದೇಶದಲ್ಲಿ ರಾತ್ರಿ ಮತ್ತು ಮುಂಜಾನೆ ಕಾವಲು ನಡೆಸಿ ತ್ಯಾಜ್ಯ ಹಾಕುವವರನ್ನು ಪತ್ತೆ ಹಚ್ಚಿ ದಂಡ ವಿಧಿಸುತ್ತಿದ್ದು, ಜನವರಿ ತಿಂಗಳಲ್ಲಿ 1,23,೦೦೦ ರೂ ದಂಡ ವಸೂಲಿ ಮಾಡಲಾಗಿರುತ್ತದೆ.
ಸಾರ್ವಜನಿಕರು, ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಹಾಕುವುದು ಕಂಡುಬAದಲ್ಲಿ ಇನ್ನೂ ಹೆಚ್ಚಿನ ಕಠಿಣ ಕ್ರಮ ಕೈಗೊಳ್ಳಲು ಕ್ರಮವಹಿಸಲಾಗುವುದು. ಆದ್ದರಿಂದ ನಗರಸಭೆಯ ಸೂಚನೆಗಳನ್ನು ಪಾಲಿಸಿ, ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…