Featured

ಉಡುಪಿ: ಸಾಲದ ಕಂತು ಬಾಕಿಯಿದೆ ಎಂದು ಕನ್ನಡದಲ್ಲಿ ಕರೆ ಮಾಡಿ ವಂಚಿಸಲು ಯತ್ನ – vishwanews24

ಉಡುಪಿ: ಸಾಲದ ಕಂತು ಬಾಕಿಯಿದೆ ಎಂದು ಕನ್ನಡದಲ್ಲಿ ಕರೆ ಮಾಡಿ ವಂಚಿಸಲು ಯತ್ನ

ಉಡುಪಿ: ಸಾಮಾನ್ಯವಾಗಿ ಆನ್‌ಲೈನ್ ವಂಚಕರು ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಆದ್ದರಿಂದ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ನಂಬಿಕೆ ಈಗ ಸುಳ್ಳಾಗಿದ್ದು, ಕಟಪಾಡಿಯ ವ್ಯಕ್ತಿಯೊಬ್ಬರಿಗೆ ಕನ್ನಡದಲ್ಲೇ ಕರೆ ಮಾಡಿದ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ್ದಾನೆ.

ಕಟಪಾಡಿಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ವಕೀಲನೆಂದು ಪರಿಚಯಿಸಿಕೊಂಡಿದ್ದಾನೆ. ಕರೆ ಮಾಡಿದ ಆತ ‘ನಿಮ್ಮ ಸಾಲದ ಕಂತು ಬಾಕಿ ಇದ್ದು, ಕೇಸ್ ಆಗಿದೆ. ಕೋರ್ಟ್ ಗೆ ಹಾಜರಾಗಬೇಕು’ ಎಂದಿದ್ದಾನೆ. ಜೊತೆಗೆ ಸಾಲದ ಕಂತನ್ನು ಗೂಗಲ್ ಪೇ ಮಾಡುವಂತೆ ಒತ್ತಡ ಹಾಕಿದ್ದಾನೆ. ಕರೆ ಬಂದಿರುವ ನಂಬರ್ 8792701216 ಆಗಿದ್ದು ಟ್ರೂ ಕಾಲರ್‌ನಲ್ಲಿ ನಾಗ ಆರ್. ಎಂದು ಹೆಸರು ತೋರಿಸುತ್ತಿದೆ.

ಬಳಿಕ ಆ ವ್ಯಕ್ತಿಯು ‘ಏ ಚಂದ್ರ ಕೂಡಲೇ ಕೋರ್ಟ್ ಗೆ ಬಾ. ಎಷ್ಟು ಹೊತ್ತಿನಲ್ಲಿ ಬರುತ್ತೀ..’ ಎಂದು ಪ್ರಶ್ನಿಸಿದ್ದು, ನಂತರ ಸಾಲ ನೀಡಿದ ಮ್ಯಾನೇಜರ್ ಅವರೊಂದಿಗೂ ಮಾತನಾಡುವಂತೆ ಹೇಳಿ ಇನ್ನೊಬ್ಬನಿಗೆ ಮೊಬೈಲ್ ಹಸ್ತಾಂತರಿದ್ದಾನೆ. ನಂತರ ಮ್ಯಾನೇಜರ್ ಎಂಬ ವ್ಯಕ್ತಿ ಮಾತನಾಡಿ, ತಾಂತ್ರಿಕ ಸಮಸ್ಯೆ ಇರುವುದರಿಂದ ಸಾಲದ ಕಂತು ಅಟೋ ಮ್ಯಾಟಿಕ್ ಆಗಿ ನಿಮ್ಮ ಖಾತೆಯಿಂದ ಪಾವತಿ ಆಗುತ್ತಿಲ್ಲ. ಕೂಡಲೇ ಗೂಗಲ್ ಪೇ ಮೂಲಕ ಪಾವತಿ ಮಾಡಿ’ ಎಂದು ಆತನೂ ಒತ್ತಡ ಹೇರಿದ್ದಾನೆ.

ಇದು ವಂಚಕರ ಕರೆಯೆಂದು ಅರಿತ ಚಂದ್ರ ಪೂಜಾರಿ ಅವರು, ನನ್ನ ಸಾಲದ ಕಂತು ಬಾಕಿ ಇಲ್ಲ. ಹಾಗೂ ಬಾಕಿ ಇದ್ದಲ್ಲಿ ಕಚೇರಿಗೇ ಬಂದು ಪಾವತಿಸುತ್ತೇನೆ. ನಿಮ್ಮ ಕಚೇರಿ ಉಡುಪಿಯಲ್ಲಿ ಎಲ್ಲಿದೆ?’ ಎಂದು ಕೇಳಿದಾಗ ತಡವರಿಸಿದ ವ್ಯಕ್ತಿಯು ಲೊಕೇಷನ್ ಕಳಿಸುತ್ತೇನೆ’ ಎಂದು ಹೇಳಿ ಕರೆ ಕಡಿತ ಮಾಡಿದ್ದಾನೆ. ನಂತರ ಚಂದ್ರು ತನ್ನ ವಾಹನಕ್ಕೆ ಸಾಲ ನೀಡಿದ ಕಂಪನಿಗೆ ಕರೆ ಮಾಡಿ ವಿಚಾರಿಸಿದಾಗ, ತಮ್ಮ ಕಚೇರಿಯಿಂದ ಯಾರೂ ಕರೆ ಮಾಡಿಲ್ಲ ಮತ್ತು ಅವರ ಸಾಲದ ಯಾವುದೇ ಕಂತು ಬಾಕಿ ಉಳಿದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago