Featured

ಉಡುಪಿ :  ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ : ರಾಷ್ಟ್ರೀಯ ಹಸಿರು ಪೀಠ ಆದೇಶ – Vishwnaews24

ಉಡುಪಿ :  ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ : ರಾಷ್ಟ್ರೀಯ ಹಸಿರು ಪೀಠ ಆದೇಶ

ಉಡುಪಿ: ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ ಎಂದು ರಾಷ್ಟ್ರೀಯ ಹಸಿರು ಪೀಠ ಆದೇಶ ಮಾಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಕ ಸಂಬಂಧ ಇದೊಂದು ಮಹತ್ವದ ಆದೇಶವಾಗಿದೆ.

ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠದ ದಕ್ಷಿಣ ವಿಭಾಗದ ನ್ಯಾಯಾಂಗ ಸದಸ್ಯ ಕೆ ರಾಮಕೃಷ್ಣನ್, ತಜ್ಞ ಸದಸ್ಯ ಡಾ.ಸತ್ಯ ಗೋಪಾಲ ಕೋರ್ಲಪಾಟಿ ಅವರುಗಳಿದ್ದ ಪೀಠವು ಈ ಆದೇಶ ಮಾಡಿದೆ. ಪರ್ಮಿಟ್ ಪ್ರಕ್ರಿಯೆ ರಾಜಧನ ಸಂಗ್ರಹ , ಹೊರಗಡೆ ಮರಳು ಮಾರಾಟಕ್ಕೆ ಅನುಮತಿ ನೀಡಿರುವ ರಾಜ್ಯ ಸರಕಾರದ ನಿಯಮಾವಳಿಯೂ ಕೂಡ ಸಿಆರ್ ಝಡ್ ಅಧಿಸೂಚನೆಯಲ್ಲಿ ನಿಷೇಧಿಸಲಾದ ಮರಳುಗಾರಿಕೆಗೆ ಸಮವಾಗಿದೆ ಎಂದಿದ.

ಸಿಆರ್ ಝಡ್ ಪುದೇಶದಲ್ಲಿ ಮರಳನ್ನು ತೆಗೆಯುವುದೇ ಆದರೆ ಅದನ್ನು ಮಾರಾಟ ಮಾಡುವಂತಿಲ್ಲ .ತೆಗೆದಿರುವ ಮರಳನ್ನು ಕೇವಲ ನದಿ ಪಾತ್ರವನ್ನು ಸಮತಟ್ಟು ಮಾಡಲು ಅಥವಾ ನದಿಪಾತ್ರದ ದಂಡ ಗಟ್ಟಿಗೊಳಿಸಲು ಬಳಸಬೇಕು ಎಂದು ಸೂಚನ ನೀಡಲಾಗಿದೆ. ಪರವಾನಿಗೆ ಹೊಂದಿರುವವರು ಅಥವಾ ಅವರ ಕುಟುಂಬದ ಸದಸ್ಯರು ಮಾತ್ರ ಕಟ್ಟುನಿಟ್ಟಾಗಿ ಸಾಂಪುದಾಯಿಕ ವಿಧಾನಗಳನ್ನು ಮಾತ್ರ ಬಳಸಿ ಮರಳು ತೆಗೆಯಬೇಕು. ಯಾವುದೇ ಉಪಗುತ್ತಿಗೆ ಅಥವಾ ಬಾಹ್ಯ ಕಾರ್ಮಿಕರ ನಿಯೋಜನ ಇರಬಾರದು ಎಂಬುದನ್ನು ಪೀಠವು ಸ್ಪಷ್ಟಪಡಿಸಿದೆ.

ಜಿಲ್ಲೆಯಲ್ಲಿ ಸಿ ಆರ್ ಝಡ್ ವ್ಯಾಪ್ತಿಯಲ್ಲಿ 23 ಮರಳು ದಿಬ್ಬಗಳನ್ನು ಗುರುತಿಸಿ ರಾಜ್ಯ ಕರಾವಳಿ ನಿಯಂತ್ರಣ ವಲಯ ಪ್ರಾಧಿಕಾರ ಅನುಮೋದನೆ ನೀಡಿತ್ತು. ಅದರಲ್ಲಿ ನಾಲ್ಕು ಮರಳು ದಿಬ್ಬಗಳು ಕುಂದಾಪುರ ವ್ಯಾಪ್ತಿಯಲ್ಲಿದ್ದು ಅದರ ಪರವಾನಿಗೆ ಅವಧಿ ಪೂರ್ಣಗೊಂಡಿದೆ. ಉಳಿದಂತೆ ಪುಸ್ತುತ ಉಡುಪಿ ಬ್ರಹ್ಮಾವರ ಭಾಗದಲ್ಲಿ 13 ಮರಳು ದಿಬ್ಬಗಳಲ್ಲಿ ಮರಳನ್ನು ತೆರವುಗೊಳಿಸಲಾಗುತ್ತಿದೆ.

ಸಿಆರ್ ಝಡ್ ವ್ಯಾಪ್ತಿಯ ಮರಳು ತೆಗೆಯುವ ವಿಚಾರವಾಗಿ ಹಸಿರುಪೀಠ ನೀಡಿದ ಆದೇಶದ ಪ್ರಮಾಣಿಕೃತ ಪ್ರತಿಯನ್ನು ಪಡೆದು ಕೊಳ್ಳಬೇಕು. ಈ ಆದೇಶವನ್ನು ಜಿಲ್ಲಾ ಆಡಳಿತ ಕಟ್ಟುನಿಟ್ಟಾಗಿ ಪಾಲಿಸುತ್ತೆ. ಈ ಬಗ್ಗೆ ಗಣಿ ಇಲಾಖೆಯ ಅಧಿಕಾರಿಗಳಿಗೂ ಸ್ಪಷ್ಟ ಸೂಚನೆಯನ್ನು ನೀಡಿದ್ದೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago