Featured

ಉಡುಪಿ :  ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ : ರಾಷ್ಟ್ರೀಯ ಹಸಿರು ಪೀಠ ಆದೇಶ – Vishwnaews24

ಉಡುಪಿ :  ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ : ರಾಷ್ಟ್ರೀಯ ಹಸಿರು ಪೀಠ ಆದೇಶ

ಉಡುಪಿ: ಸಿಆರ್ ಝಡ್ ಪುದೇಶದಲ್ಲಿ ತೆಗೆದಿರುವ ಮರಳನ್ನು ಮಾರಾಟ ಮಾಡುವಂತೆ ಇಲ್ಲ ಎಂದು ರಾಷ್ಟ್ರೀಯ ಹಸಿರು ಪೀಠ ಆದೇಶ ಮಾಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮರಳುಗಾರಿಕ ಸಂಬಂಧ ಇದೊಂದು ಮಹತ್ವದ ಆದೇಶವಾಗಿದೆ.

ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠದ ದಕ್ಷಿಣ ವಿಭಾಗದ ನ್ಯಾಯಾಂಗ ಸದಸ್ಯ ಕೆ ರಾಮಕೃಷ್ಣನ್, ತಜ್ಞ ಸದಸ್ಯ ಡಾ.ಸತ್ಯ ಗೋಪಾಲ ಕೋರ್ಲಪಾಟಿ ಅವರುಗಳಿದ್ದ ಪೀಠವು ಈ ಆದೇಶ ಮಾಡಿದೆ. ಪರ್ಮಿಟ್ ಪ್ರಕ್ರಿಯೆ ರಾಜಧನ ಸಂಗ್ರಹ , ಹೊರಗಡೆ ಮರಳು ಮಾರಾಟಕ್ಕೆ ಅನುಮತಿ ನೀಡಿರುವ ರಾಜ್ಯ ಸರಕಾರದ ನಿಯಮಾವಳಿಯೂ ಕೂಡ ಸಿಆರ್ ಝಡ್ ಅಧಿಸೂಚನೆಯಲ್ಲಿ ನಿಷೇಧಿಸಲಾದ ಮರಳುಗಾರಿಕೆಗೆ ಸಮವಾಗಿದೆ ಎಂದಿದ.

ಸಿಆರ್ ಝಡ್ ಪುದೇಶದಲ್ಲಿ ಮರಳನ್ನು ತೆಗೆಯುವುದೇ ಆದರೆ ಅದನ್ನು ಮಾರಾಟ ಮಾಡುವಂತಿಲ್ಲ .ತೆಗೆದಿರುವ ಮರಳನ್ನು ಕೇವಲ ನದಿ ಪಾತ್ರವನ್ನು ಸಮತಟ್ಟು ಮಾಡಲು ಅಥವಾ ನದಿಪಾತ್ರದ ದಂಡ ಗಟ್ಟಿಗೊಳಿಸಲು ಬಳಸಬೇಕು ಎಂದು ಸೂಚನ ನೀಡಲಾಗಿದೆ. ಪರವಾನಿಗೆ ಹೊಂದಿರುವವರು ಅಥವಾ ಅವರ ಕುಟುಂಬದ ಸದಸ್ಯರು ಮಾತ್ರ ಕಟ್ಟುನಿಟ್ಟಾಗಿ ಸಾಂಪುದಾಯಿಕ ವಿಧಾನಗಳನ್ನು ಮಾತ್ರ ಬಳಸಿ ಮರಳು ತೆಗೆಯಬೇಕು. ಯಾವುದೇ ಉಪಗುತ್ತಿಗೆ ಅಥವಾ ಬಾಹ್ಯ ಕಾರ್ಮಿಕರ ನಿಯೋಜನ ಇರಬಾರದು ಎಂಬುದನ್ನು ಪೀಠವು ಸ್ಪಷ್ಟಪಡಿಸಿದೆ.

ಜಿಲ್ಲೆಯಲ್ಲಿ ಸಿ ಆರ್ ಝಡ್ ವ್ಯಾಪ್ತಿಯಲ್ಲಿ 23 ಮರಳು ದಿಬ್ಬಗಳನ್ನು ಗುರುತಿಸಿ ರಾಜ್ಯ ಕರಾವಳಿ ನಿಯಂತ್ರಣ ವಲಯ ಪ್ರಾಧಿಕಾರ ಅನುಮೋದನೆ ನೀಡಿತ್ತು. ಅದರಲ್ಲಿ ನಾಲ್ಕು ಮರಳು ದಿಬ್ಬಗಳು ಕುಂದಾಪುರ ವ್ಯಾಪ್ತಿಯಲ್ಲಿದ್ದು ಅದರ ಪರವಾನಿಗೆ ಅವಧಿ ಪೂರ್ಣಗೊಂಡಿದೆ. ಉಳಿದಂತೆ ಪುಸ್ತುತ ಉಡುಪಿ ಬ್ರಹ್ಮಾವರ ಭಾಗದಲ್ಲಿ 13 ಮರಳು ದಿಬ್ಬಗಳಲ್ಲಿ ಮರಳನ್ನು ತೆರವುಗೊಳಿಸಲಾಗುತ್ತಿದೆ.

ಸಿಆರ್ ಝಡ್ ವ್ಯಾಪ್ತಿಯ ಮರಳು ತೆಗೆಯುವ ವಿಚಾರವಾಗಿ ಹಸಿರುಪೀಠ ನೀಡಿದ ಆದೇಶದ ಪ್ರಮಾಣಿಕೃತ ಪ್ರತಿಯನ್ನು ಪಡೆದು ಕೊಳ್ಳಬೇಕು. ಈ ಆದೇಶವನ್ನು ಜಿಲ್ಲಾ ಆಡಳಿತ ಕಟ್ಟುನಿಟ್ಟಾಗಿ ಪಾಲಿಸುತ್ತೆ. ಈ ಬಗ್ಗೆ ಗಣಿ ಇಲಾಖೆಯ ಅಧಿಕಾರಿಗಳಿಗೂ ಸ್ಪಷ್ಟ ಸೂಚನೆಯನ್ನು ನೀಡಿದ್ದೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago