ಉಡುಪಿ :  ಸಿಎಸ್ಪಿ ಎ ಆರ್ ಚೇತನ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ – Vishwanews24

Featured, ಉಡುಪಿ

ಉಡುಪಿ :  ಸಿಎಸ್ಪಿ ಎ ಆರ್ ಚೇತನ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ – Vishwanews24

ಬೆಂಗಳೂರು: ಉಡುಪಿ ಕರಾವಳಿ ಕಾವಲು ಪೋಲಿಸ್ ಪಡೆಯ ಎಸ್ಪಿ ಎ ಆರ್ ಚೇತನ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

ಉಡುಪಿಯ ಕರಾವಳಿ ಕಾವಲು ಪೊಲೀಸ್‌ (ಸಿಎಸ್ಪಿ) ಎ ಆರ್.ಚೇತನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣನವರ್ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್ಪಿ ಹುದ್ದೆಯಿಂದ ವರ್ಗಾವಣೆಗೊಳಿಸಿ ಸಿಐಡಿ ವಿಭಾಗದ ಬೆಂಗಳೂರು ಎಸ್ಪಿಯಾಗಿ ನೇಮಿಸಲಾಗಿದೆ

ಕೋಲಾರ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಎಸ್ಪಿ(ವೈರಲೆಸ್) ಆಗಿ, ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ ರಾಹುಲ್ ಕುಮಾರ್ ಶಹಾಪೂರ್ವದ್ ಅವರನ್ನು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ದಾವಣಗೆರೆ ಜಿಲ್ಲೆಯ ಎಸ್ಪಿ ಹನುಮಂತರಾಯ ಅವರನ್ನು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು, ಮೈಸೂರು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿರುವ ಡಾ.ಎ.ಎನ್.ಪ್ರಕಾಶ್ ಗೌಡ ಅವರನ್ನು ಬೆಂಗಳೂರು ಅಂತರಿಕ ಭದ್ರತಾ ವಿಭಾಗಗಕ್ಕೆ ವರ್ಗಾವಣೆ ಮಾಡಲಾಗಿದೆ.

ಅದೇ ರೀತಿ, ಹಾವೇರಿ ಜಿಲ್ಲೆಯ ಎ ಕೆ.ಜಿ.ದೇವರಾಜು ಅವರನ್ನು ಬೆಂಗಳೂರು ಸಿಐಡಿ ವಿಭಾಗದ ಎಸ್ಪಿಯಾಗಿ, ಮೈಸೂರಿನ ಎಸ್ಸಿ.ಸಿ.ಟಿ.ರಿಷ್ಯಂತ್ ಅವರನ್ನು ದಾವಣಗೆರೆ ಜಿಲ್ಲೆ ಎಸ್ಪಿಯಾಗಿ ವರ್ಗಾಯಿಸಲಾಗಿದೆ. ಕಲಬುರ್ಗಿ ಜಿಲ್ಲೆಯ ಡಿಸಿಪಿ ಡಿ.ಕಿಶೋರ್ ಬಾಬು ಅವರು ಕೋಲಾರ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.

ತುಮಕೂರಿನ ಎಸ್ಪಿ ಡಾ.ಕೆ.ವಂಶಿ ಕೃಷ್ಣಾ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್ಬಿಯಾಗಿ, ಬೆಂಗಳೂರಿನ ಆಂತರಿಕ ಭದ್ರತಾ ಇಲಾಖೆಯ ಪ್ರವೀಶ್ ಗುಂಟೆ ಅವರನ್ನು ಮೈಸೂರು ನಗರದ ಕಾನೂನು ಸುವ್ಯವಸ್ತೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ(ವಯರ್ ಲೆಸ್) ಎಸ್ಪಿ ಎ.ಶ್ರೀನಿವಾಸುಲು ಅವರನ್ನು ಕಲಬುರ್ಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ ಎಂದು ಆದೇಶದ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.