Featured

ಉಡುಪಿ :  ಸಿಎಸ್ಪಿ ಎ ಆರ್ ಚೇತನ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ – Vishwanews24

ಉಡುಪಿ :  ಸಿಎಸ್ಪಿ ಎ ಆರ್ ಚೇತನ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ – Vishwanews24

ಬೆಂಗಳೂರು: ಉಡುಪಿ ಕರಾವಳಿ ಕಾವಲು ಪೋಲಿಸ್ ಪಡೆಯ ಎಸ್ಪಿ ಎ ಆರ್ ಚೇತನ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

ಉಡುಪಿಯ ಕರಾವಳಿ ಕಾವಲು ಪೊಲೀಸ್‌ (ಸಿಎಸ್ಪಿ) ಎ ಆರ್.ಚೇತನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣನವರ್ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್ಪಿ ಹುದ್ದೆಯಿಂದ ವರ್ಗಾವಣೆಗೊಳಿಸಿ ಸಿಐಡಿ ವಿಭಾಗದ ಬೆಂಗಳೂರು ಎಸ್ಪಿಯಾಗಿ ನೇಮಿಸಲಾಗಿದೆ

ಕೋಲಾರ ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಎಸ್ಪಿ(ವೈರಲೆಸ್) ಆಗಿ, ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ ರಾಹುಲ್ ಕುಮಾರ್ ಶಹಾಪೂರ್ವದ್ ಅವರನ್ನು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ದಾವಣಗೆರೆ ಜಿಲ್ಲೆಯ ಎಸ್ಪಿ ಹನುಮಂತರಾಯ ಅವರನ್ನು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು, ಮೈಸೂರು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿರುವ ಡಾ.ಎ.ಎನ್.ಪ್ರಕಾಶ್ ಗೌಡ ಅವರನ್ನು ಬೆಂಗಳೂರು ಅಂತರಿಕ ಭದ್ರತಾ ವಿಭಾಗಗಕ್ಕೆ ವರ್ಗಾವಣೆ ಮಾಡಲಾಗಿದೆ.

ಅದೇ ರೀತಿ, ಹಾವೇರಿ ಜಿಲ್ಲೆಯ ಎ ಕೆ.ಜಿ.ದೇವರಾಜು ಅವರನ್ನು ಬೆಂಗಳೂರು ಸಿಐಡಿ ವಿಭಾಗದ ಎಸ್ಪಿಯಾಗಿ, ಮೈಸೂರಿನ ಎಸ್ಸಿ.ಸಿ.ಟಿ.ರಿಷ್ಯಂತ್ ಅವರನ್ನು ದಾವಣಗೆರೆ ಜಿಲ್ಲೆ ಎಸ್ಪಿಯಾಗಿ ವರ್ಗಾಯಿಸಲಾಗಿದೆ. ಕಲಬುರ್ಗಿ ಜಿಲ್ಲೆಯ ಡಿಸಿಪಿ ಡಿ.ಕಿಶೋರ್ ಬಾಬು ಅವರು ಕೋಲಾರ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.

ತುಮಕೂರಿನ ಎಸ್ಪಿ ಡಾ.ಕೆ.ವಂಶಿ ಕೃಷ್ಣಾ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್ಬಿಯಾಗಿ, ಬೆಂಗಳೂರಿನ ಆಂತರಿಕ ಭದ್ರತಾ ಇಲಾಖೆಯ ಪ್ರವೀಶ್ ಗುಂಟೆ ಅವರನ್ನು ಮೈಸೂರು ನಗರದ ಕಾನೂನು ಸುವ್ಯವಸ್ತೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ(ವಯರ್ ಲೆಸ್) ಎಸ್ಪಿ ಎ.ಶ್ರೀನಿವಾಸುಲು ಅವರನ್ನು ಕಲಬುರ್ಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ ಎಂದು ಆದೇಶದ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

12 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

13 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

14 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

14 hours ago