ಉಡುಪಿ : ಸಿಎ ಉದ್ಯೋಗಿ ಉದ್ಯಾವರ ಪಿತ್ರೋಡಿಯ ಮಲ್ಲೇಶ್ ನಿಧನ – Vishwanews24

Featured, ಉಡುಪಿ

ಉಡುಪಿ : ಸಿಎ ಉದ್ಯೋಗಿ ಉದ್ಯಾವರದ ಪಿತ್ರೋಡಿಯ ಮಲ್ಲೇಶ್ ನಿಧನ

ಉಡುಪಿ : ನಗರದ ಸಿಎ ಉದ್ಯೋಗಿ ಉದ್ಯಾವರದ ಪಿತ್ರೋಡಿಯ ಮಲ್ಲೇಶ್ (40) ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜನರೊಂದಿಗೆ ಅತ್ಯಂತ ಸ್ನೇಹ ಜೀವಿ ಆಗಿದ್ದ ಅವರು ತಂದೆ ತಾಯಿ, ಸೋದರಿ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಸಹಿತ ಅಪಾರ ಬಂಧು ಬಳಗ ಮತ್ತು ಸ್ನೇಹಿತ ವರ್ಗವನ್ನು ಅಗಲಿದ್ದಾರೆ.

ಉಡುಪಿಯ ಬನ್ನಂಜೆಯಲ್ಲಿ ಸಿಎ ಆಫೀಸ್ ನ್ನು ನಡೆಸುತ್ತಿದ್ದ ಇವರು, ಸಿ ಎ ಅಸೋಸಿಯೇಶನ್ ನ ಕಾರ್ಯಕಾರಿ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಉದ್ಯಾವರ ಪಿತ್ರೋಡಿಯ ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್‍ನ ಮಾಜಿ ಅಧ್ಯಕ್ಷರಾಗಿದ್ದ ಇವರು ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನ ಸಂಘದ ಸದಸ್ಯರಾಗಿ ಹಲವು ಬಾರಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದ್ದರು.

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ: ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ರಿಕ್ಷಾ ಹಸ್ತಾಂತರ – Vishwanews24

 

Leave a Reply