ಉಡುಪಿ : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಉಡುಪಿ ಶಾಖೆ ಮಳಿಗೆಯಲ್ಲಿ ಬುಧವಾರ ಪ್ರದಾನ ಮಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಮಕ್ಕಳು, ಯುವಜನತೆ ಸಮಾಜಮುಖಿಯಾಗಿ ಪರಿಸರ ಕಾಳಜಿ ಹೊಂದುವುದು ಅಗತ್ಯ ಮತ್ತು ಅನಿವಾರ್ಯ. ಮಕ್ಕಳಿಗೆ ಉಪದೇಶದ ಬದಲು ಯಾವುದೇ ಉತ್ತಮ ಕೆಲಸವನ್ನು ಮಾಡಿ ತೋರಿಸಬೇಕು. ಮನೆಗಳಲ್ಲಿ ಗ್ರಂಥಾಲಯ ರೂಪುಗೊಂಡರೆ ಬೌದ್ಧಿಕ ಶ್ರೀಮಂತಿಕೆ ಹೆಚ್ಚಳ ಸಾಧ್ಯ ಎಂದು ಹೇಳಿದರು.
ಪಾಂಡೇಶ್ವರ ಗುರುಕುಲದ ಡಾ. ವಿಜಯ ಕುಮಾರ್ ಮಂಜರ್ ಅಧ್ಯಕ್ಷತೆ ವಹಿಸಿ, ಸಂಗೀತ, ಕಲೆ, ಸಾಹಿತ್ಯದಿಂದ ಜೀವನ ಪರಿಪೂರ್ಣ. ಇವು ಮೂರೂ ಇಲ್ಲದವ ಬಾಲ, ಕೊಂಬಿಲ್ಲದ, ಆದರೆ ಹುಲ್ಲೂ ತಿನ್ನದ ಪಶುವಿಗೆ ಸಮಾನ. ವ್ಯಕ್ತಿಯ ದೇಹ, ಮನಸ್ಸಿನ ಆರೋಗ್ಯ ಕಾಪಾಡುವ ವೈದ್ಯ, ವ್ಯಕ್ತಿ/ಸಂಸ್ಥೆಯ ಆರ್ಥಿಕ ಕಾಪಾಡುವ ಲೆಕ್ಕ ಪರಿಶೋಧಕ, ಸಮಾಜದ ಸ್ವಾಸ್ಥ್ಯ ಕಾಪಾಡುವ ಪತ್ರಕರ್ತ ಸಮಾಜದಲ್ಲಿ ಪ್ರಾಮುಖ್ಯತೆ ಪಡೆದಿದ್ದಾರೆ ಎಂದರು.
ಸಂಸ್ಕೃತಿ ವಿಶ್ವ ಪ್ರತಿಷ್ಠ್ಠಾನದ ಸ್ಥಾಪಕ ಯು.ವಿಶ್ವನಾಥ್ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ. ಮಾತನಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಶಂಕರ್, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವ್ಯವಸ್ಥಾಪಕ ವಿಜಯ್ ಕುಮಾರ್ ಡಿ. ಉಪಸ್ಥಿತರಿದ್ದರು.
ಪುರಸ್ಕಾರ ಪ್ರದಾನ
ಮಲಬಾರ್ ವಿಶ್ವ ವೈದ್ಯ ಪುರಸ್ಕಾರವನ್ನು ಡಾ. ಎ. ರಾಮಚಂದ್ರ ಬಾಯರಿ, ಡಾ. ಕೆ.ಸತೀಶ್ ಕಾಮತ್, ಡಾ. ಇಂದಿರಾ ವಿ.ಶಾನುಭೋಗ್, ಮಲಬಾರ್ ವಿಶ್ವ ಲೆಕ್ಕ ಪರಿಶೋಧಕರ ಪುರಸ್ಕಾರವನ್ನು ಸಿಎ ದೇವ ಆನಂದ್, ಸಿಎ ಗಣೇಶ್ ಎರ್ಮಾಳು ಹಾಗೂ ಮಲಬಾರ್ ವಿಶ್ವ ಪತ್ರಿಕಾ ಪುರಸ್ಕಾರವನ್ನು ಶಶಿಧರ್ ಮಾಸ್ತಿಬೈಲು, ಬಾಲಕೃಷ್ಣ ಪೂಜಾರಿ ಉಚ್ಚಿಲ, ರಾಮ್ ಅಜೆಕಾರ್ ಸ್ವೀಕರಿಸಿದರು.
ಸನ್ಮಾನ ಪತ್ರವನ್ನು ಡಾ. ಭಾರ್ಗವಿ ಐತಾಳ್, ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ, ರಂಜನಿ ವಸಂತ್ ವಾಚಿಸಿದರು. ವಿದ್ಯಾ ಶ್ಯಾಮ ಸುಂದರ್ ಪ್ರಾರ್ಥಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು. ಜನಾರ್ದನ ಕೊಡವೂರು ಸ್ವಾಗತಿಸಿದರು. ವಿಘ್ನೇಶ್ವರ ಅಡಿಗ ಪ್ರಾಸ್ತಾವಿಕ ಮಾತನಾಡಿದರು. ರಾಜೇಶ್ ಪಣಿಯಾಡಿ ವಂದಿಸಿದರು.
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…