ಉಡುಪಿ: ಸಂಚಾರ ಪೊಲೀಸರು ನೀಡಿರುವ ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು.
ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್ ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್ ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಯಿತು.
ಅದರಂತೆ ಗಡುವು ಮುಗಿದ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ಏಳು ಬಸ್ ಗಳಲ್ಲಿದ್ದ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಲಾಯಿತು. ಬಸ್ ಗಳ ವಿರುದ್ಧ ತಲಾ 500ರೂ.ನಂತೆ ಒಟ್ಟು 3500 ರೂ. ದಂಡ ವಿಧಿಸಲಾಯಿತು. ಎರಡನೇ ಬಾರಿಗೆ 1000ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ.
ಈಗಾಗಲೇ ಗಡುವು ನೀಡಿರುವ ಹಿನ್ನೆಲೆಯಲ್ಲಿ ಬಹುತೇಕ ಸಿಟಿ ಬಸ್ ಗಳು ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿದೆ. ಆದುದರಿಂದ ಈ ಕಾರ್ಯಾಚರಣೆ ಮತ್ತೆ ಮುಂದುವರೆಯಲಿದೆ. ಮುಂದೆ ಸರ್ವಿಸ್ ಬಸ್ ಗಳ ವಿರುದ್ಧವೂ ಕಾರ್ಯಚರಣೆ ನಡೆಸಲಾಗುವುದು ಎಂದು ಎಸ್ಸೈ ಸುದರ್ಶನ್ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…