ಉಡುಪಿ: ಡಿ. 3ರಂದು ಸಿಟಿ ಬಸ್ ನಿಲ್ದಾಣದ ಬಳಿ ಆಟವಾಡುತ್ತಿದ್ದ ಇಬ್ಬರು ಬಾಲಕರು ಅಪಹರಣಕ್ಕೆ ಒಳಗಾಗಿರಬಹುದೆಂದು ಶಂಕಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಬಾಲಕರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆಯ ನಿವಾಸಿ ನಾಗರಾಜ ಎಂಬವರ ಮಗ ಸಂತೋಷ (11) ಮತ್ತು ನಾಗರಾಜ ಅವರ ಪತ್ನಿಯ ತಂಗಿ ಮಂಗಳ ಎಂಬವರ ಪುತ್ರ ವಿಷ್ಣು (9) ಎಂದು ಗುರುತಿಸಲಾಗಿದೆ.
ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಆಟವಾಡುತ್ತಿದ್ದ ಸಂತೋಷ್ ಹಾಗೂ ವಿಷ್ಣು ನಾಪತ್ತೆಯಾಗಿದ್ದು, ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಈ ಇಬ್ಬರು ಬಾಲಕರನ್ನು ದುಷ್ಕರ್ಮಿಗಳು ಪುಸಲಾಯಿಸಿ ಕರೆದುಕೊಂಡು ಹೋಗಿರಬಹುದು ಅಥವಾ ಅಪಹರಣಕ್ಕೆ ಒಳಾಗಿರಬಹುದು ಎಂದು ಶಂಕಿಸಲಾಗಿದೆ.
ನಾಜರಾಜ ಅವರು ಡಿ. 7ರಂದು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ ಮಹಿಳಾ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…