Featured

ಉಡುಪಿ :ಸಿಟಿ ಸೆಂಟರ್ ಮಾಲ್‌ಗೆ ‘ಟಿಪ್ ಟಾಪ್ ಸಿಟಿ ಸೆಂಟರ್ ಮಾಲ್’ಎಂದು ಮರುನಾಮಕರಣ – vishwanews24

ಉಡುಪಿ : ಸಿಟಿ ಸೆಂಟರ್ ಮಾಲ್‌ಗೆ ‘ಟಿಪ್ ಟಾಪ್ ಸಿಟಿ ಸೆಂಟರ್ ಮಾಲ್’ಎಂದು ಮರುನಾಮಕರಣ

ಉಡುಪಿ: ಉದ್ಯಮಿ ಕೋಡಿ ಇಬ್ರಾಹಿಂ ಮೊಹಮ್ಮದ್ ಅವರ ಪೂರ್ಣಪ್ರಮಾಣದ ಬೆಂಬಲದೊಂದಿಗೆ ಉಡುಪಿ ನಗರದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಸಿಟಿ ಸೆಂಟರ್ ಮಾಲ್ ಅನ್ನು `ಟಿಪ್ ಟಾಪ್ ಸಿಟಿ ಸೆಂಟರ್ ಮಾಲ್’ ಎಂಬುದಾಗಿ ಮರು ನಾಮಕರಣ ಮಾಡಲಾಗಿದೆ ಎಂದು ಸಿಟಿ ಸೆಂಟರ್ ಮಾಲಕ ಜಮಾಲುದ್ದೀನ್ ತಿಳಿಸಿದ್ದಾರೆ.

ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2018ರಲ್ಲಿ ಕೋಡಿ ಇಬ್ರಾಹಿಂ ಮೊಹಮ್ಮದ್ ಸಿಟಿ ಸೆಂಟರ್ ಮಾಲ್‌ಗೆ ಬೃಹತ್ ಮೊತ್ತದ ಹೂಡಿಕೆ ಮಾಡಿದ್ದು, ಇದೀಗ ಈ ಮಾಲ್‌ನಲ್ಲಿ ಪೂರ್ಣಪ್ರಮಾಣದ ಬೆಂಬಲವನ್ನು ನೀಡಿ ಅಭಯ ಹಸ್ತವನ್ನು ನೀಡಿದ್ದಾರೆ. ಈ ಮೂಲಕ ಸಿಟಿ ಸೆಂಟರ್ ಮಾಲ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿದೆ ಎಂದರು.

ಟಿಪ್‌ಟಾಪ್ ಸಿಟಿ ಸೆಂಟರ್ ಮಾಲ್‌ನ್ನು ಅತ್ಯುತ್ತಮ ವ್ಯಾಪಾರ ವಹಿವಾಟಿನ ಕೇಂದ್ರವಾಗಿ ಬೆಳೆಸಲು ಕಟ್ಟಿಬದ್ಧರಾಗಿದ್ದು, ಕೋಡಿ ಇಬ್ರಾಹಿಂ ಮೊಹಮ್ಮದ್ ಮಾಲ್‌ನ್ನು ಪ್ರಗತಿ ಪಥದಲ್ಲಿ ದೀರ್ಘ ಕಾಲ ನಡೆಸಿಕೊಂಡು ಹೋಗಲು ನಾವು ಜೊತೆಯಾಗಿ ಸಾಗಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು. ಕೋಡಿ ಇಬ್ರಾಹಿಂ ಮೊಹಮ್ಮದ್ ನಮ್ಮೊಂದಿಗೆ ಕೈಜೋಡಿಸಿದ ಕಾರಣ ಈ ಮಾಲ್ ಸರ್ವತೋಮುಖ ಬೆಳವಣಿಗೆ ಕಂಡು ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಉದ್ಯಮಿ ಕೋಡಿ ಇಬ್ರಾಹಿಂ ಮೊಹಮ್ಮದ್ ಮಾತನಾಡಿ, ಎಲ್ಲ ರೀತಿಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನಾವು ಒಂದಾಗಿ ಈ ಮಾಲ್‌ನ್ನು ಹೊಸ ರೀತಿಯಲ್ಲಿ ಮುನ್ನಡೆಸಲಿದ್ದೇವೆ. ಆ ಮೂಲಕ ಈ ಮಾಲ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಸಿಟಿ ಸೆಂಟರ್ ಮಾಲ್‌ನ ಮೆನೇಜರ್ ರಾಧಾಕೃಷ್ಣ ಪ್ರಭು, ಬ್ಯುಸಿನೆಸ್ ಹೆಡ್ ಹನೀಫ್ ಮುಹಮ್ಮದ್, ಉದ್ಯಮಿ ಮುಸ್ತಕ್ ಉಪಸ್ಥಿತರಿದ್ದರು

Vishwa News 24

Recent Posts

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 seconds ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

11 minutes ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

18 minutes ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

34 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

57 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

22 hours ago