Featured

ಉಡುಪಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು ಎಂಬುದನ್ನು ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದವರೇ ಬಹಿರಂಗಪಡಿಸಿದ್ದರು ಎಂದು ಕೃಷ್ಣ ಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ‘ವಿಶ್ವಾರ್ಪಣಂ’ ಕಾರ್ಯಕ್ರಮದಲ್ಲಿ ಗುರುವಾರ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಈ ಮಾಹಿತಿ ನೀಡಿದ್ದಾರೆ.

ಹಿಂದಿನ ಸರ್ಕಾರ ಕೃಷ್ಣ ಮಠವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಯೋಚನೆ ಮಾಡಿತ್ತು. ಈ ಸುದ್ದಿ ತಿಳಿದ ತಕ್ಷಣ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ, ‘ಉಡುಪಿ ಕೃಷ್ಣ ಮಠಕ್ಕೆ ಏನಾದರೂ ತೊಂದರೆಯಾದರೆ ಶಾಸಕ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡುವವ ನಾನಾಗಿರುತ್ತೇನೆ’ ಎಂಬುದಾಗಿ ಹೇಳಿ ಈ ಪ್ರಸ್ತಾವನೆಗೆ ಪೂರ್ಣವಿರಾಮ ಹಾಕುವ ಸಣ್ಣ ಸೇವೆ ಮಾಡಿದ್ದೇನೆ. ಈ ಬಗ್ಗೆ ನನಗೆ ತೃಪ್ತಿ ಇದೆ ಎಂದು ಹೇಳಿದರು.

ಪಲಿಮಾರು ಶ್ರೀಗಳ ಪರ್ಯಾಯದಲ್ಲಿ ಮಧ್ವ ಸರೋವರಕ್ಕೆ ಹಾಗೂ ಸುತ್ತಮುತ್ತಲಿನ ಮಠದ ಬಾವಿಗಳಿಗೆ ಡ್ರೈನೇಜ್ ನೀರು ಬರುತ್ತಿತ್ತು. ಹೀಗಾಗಿ ನಗರಸಭೆಯಿಂದ 45 ಲಕ್ಷ ರೂ. ಅನುದಾನ ಕಲ್ಪಿಸಿ ಒಳಚರಂಡಿ ವ್ಯವಸ್ಥೆ ಸರಿಪಡಿಸಲಾಗಿತ್ತು ಎಂದರು.ಪ್ರಮಾಣವಚನಕ್ಕೆ ಪಿಐಎಲ್ ಉಡುಪಿ ಕೃಷ್ಣ -ಮುಖ್ಯಪ್ರಾಣ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಕ್ಕೆ ಕೆಲವರು ನನ್ನನ್ನು ಶಾಸಕ ಸ್ಥಾನದಿಂದ ಅನೂರ್ಜಿತಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಹಾಕಿದ್ದರು. ಇದರಿಂದ ನನಗೇನು ತೊಂದರೆಯಾಗಿಲ್ಲ. ಆದರೆ ಇಂಥ ಮನಸ್ಥಿತಿಯ ಜನರೂ ಜಗತ್ತಿನಲ್ಲಿದ್ದಾರೆ ಎಂದು ಪ್ರಮೋದ್ ಹೇಳಿದರು.

ಈ ವೇಳೆ ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

2 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 days ago