ಉಡುಪಿ: ಅಯೋಧ್ಯೆ ಶ್ರೀ ರಾಮ ಮಂದಿರದ ದರ್ಶನ ಪಡೆದು ರಾಮ ಭಕ್ತರು ವಾಪಸಾಗುತ್ತಿದ್ದ ಅಯೋಧ್ಯೆ ಧಾಮ ರೈಲಿಗೆ ಹೊಸಪೇಟೆಯಲ್ಲಿ ಮತಾಂಧ ಶಕ್ತಿಗಳು ಗೋಧ್ರಾ ಮಾದರಿಯಲ್ಲಿ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದ್ದು, ಸಿದ್ದರಾಮಯ್ಯ ಸರಕಾರದಲ್ಲಿ ರಾಮ ಭಕ್ತರಿಗೆ ರಕ್ಷಣೆ ಇಲ್ಲ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಲ್ಪಸಂಖ್ಯಾತ ತುಷ್ಟೀಕರಣದ ಫಲವಾಗಿ ಮತಾಂಧ ಶಕ್ತಿಗಳು ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕಲು ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡಿದೆ. ಬಹುಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯಿಲ್ಲ ಎಂಬುದು ಇದೀಗ ಮತ್ತೊಮ್ಮೆ ಸಾಬೀತಾಗಿದೆ.
ಈ ಹಿಂದೆ ಗೋಧ್ರಾ ಮಾದರಿಯ ಘಟನೆಗಳು ರಾಜ್ಯದಲ್ಲಿ ನಡೆಯುವ ಬಗ್ಗೆ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಪ್ರೇರಣೆ ನೀಡಿದ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ರನ್ನು ತಕ್ಷಣ ತನಿಖೆಗೆ ಒಳಪಡಿಸಬೇಕು.
ರಾಜ್ಯ ಸರ್ಕಾರದ ಮೇಲೆ ಜನತೆಗೆ ಕಾನೂನು ಸುವ್ಯವಸ್ಥೆಯ ನಿಟ್ಟಿನಲ್ಲಿ ಯಾವುದೇ ಭರವಸೆ ಉಳಿದಿಲ್ಲ, ಕೇಂದ್ರ ಸರ್ಕಾರ ತಕ್ಷಣ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದೇಶದ ಆಂತರಿಕ ಭದ್ರತೆಯ ದೃಷ್ಟಿಯಿಂದ ಎನ್ ಐ ಎ ತನಿಖೆಗೆ ಹಸ್ತಾಂತರಿಸಿ ಕೃತ್ಯದ ಹಿಂದಿನ ಜಾಲವನ್ನು ಬಯಲಿಗೆಳೆದು ಮತಾಂಧ ಶಕ್ತಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…