Featured

ಉಡುಪಿ : ಸಿದ್ಧರಾಮೋತ್ಸವದ ಯಶಸ್ಸು, ಕಾಂಗ್ರೆಸ್ ನತ್ತ ಜನರ ಒಲವು ನೋಡಿ ಹತಾಶರಾದ ಬಿಜೆಪಿಗರು ಮೊಟ್ಟೆ ಎಸೆದಿದ್ದಾರೆ : ರಮೇಶ್‌ ಕಾಂಚನ್ – Vishwanews24

ಸಿದ್ಧರಾಮೋತ್ಸವದ ಯಶಸ್ಸು, ಕಾಂಗ್ರೆಸ್ ನತ್ತ ಜನರ ಒಲವು ನೋಡಿ ಹತಾಶರಾದ

ಬಿಜೆಪಿಗರು ಮೊಟ್ಟೆ ಎಸೆದಿದ್ದಾರೆ : ರಮೇಶ್‌ ಕಾಂಚನ್

ಉಡುಪಿ: ಸಿದ್ದರಾಮೋತ್ಸವದ ಅಭೂತಪೂರ್ವ ಯಶಸ್ಸು ಮತ್ತು ಕಾಂಗ್ರೆಸ್ ನತ್ತ ಜನರ ಒಲವು ನೋಡಿ ಹತಾಶರಾದ ಬಿಜೆಪಿಗರು ಕೊಡಗಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ಬಂದಿದ್ದ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ ಪ್ರಯತ್ನ ಮಾಡಿದ್ದಾರೆಂದು ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

ಇಂದು ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿದೆ.ಜನರು ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಗಣೇಶೋತ್ಸವದ ಪೆಂಡಾಲಿಗೂ 18% ಜಿ.ಎಸ್.ಟಿ ಕೊಡಬೇಕಾಗದ ಪರಿಸ್ಥಿತಿಯನ್ನು ಸರಕಾರ ತಂದೊಡ್ಡಿದೆ. ಅಧಿಕಾರ ಯಂತ್ರ ಕುಸಿದು ಸರಕಾರ ವೈಫಲ್ಯದ ಹಾದಿಯಲ್ಲಿರುವಾಗ ಹತಾಶರಾದ ಬಿಜೆಪಿ ಕಾರ್ಯಕರ್ತರು ವಿರೋಧ ಪಕ್ಷ ನಾಯಕರ ಮೇಲೆ ಮೊಟ್ಟೆ ಎಸೆಯುವಂತಹ ಪ್ರಜಾಪ್ರಭುತ್ವ ಮೌಲ್ಯದ ವಿರುದ್ಧವಾದ ಕೃತ್ಯದಲ್ಲಿ ತೊಡಗಿಕೊಂಡಿದ್ದಾರೆ.

ಜೊತೆ ಜೊತೆಯಲಿ ನಾಯಕ ನಟ ಅನಿರುದ್ಧ್ ಗೆ 2 ವರ್ಷಗಳ ಕಾಲ ನಿಷೇಧ ಹೇರಿದ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ ..

ಕರಾವಳಿ ಭಾಗದಲ್ಲಿ ಅತೀವೃಷ್ಠಿಯಿಂದಾಗಿ ಅಂದಾಜು 250 ಕೋಟಿಗಿಂತ ಅಧಿಕ ನಷ್ಟವಾಗಿದೆ. ಮೀನುಗಾರರ ದೋಣಿ ನಾಶವಾಗಿದೆ. ಕೃಷಿ ಭೂಮಿ ಹಾಳಾಗಿದೆ. ಜನರ ಮನೆ, ತೋಟ ನಾಶವಾಗಿದೆ. ಅದರ ಕುರಿತು ಗಮನ ಹರಿಸಬೇಕಾದ ಆಡಳಿತರೂಢ ಬಿಜೆಪಿಗರು ಇಂದು ಕೇವಲ ಹದಿನೈದು ಕೋಟಿ ಪರಿಹಾರ ಘೋಷಿಸಿ ಕೈತೊಳೆದುಕೊಂಡಿದ್ದಾರೆ. ಜನರ ಗಮನ ಬೇರೆಡೆ ಹರಿಸಲು ಹಿಂದು-ಮುಸ್ಲಿಮ್ ಆಟದಲ್ಲಿ ತಲ್ಲೀನರಾಗಿದ್ದಾರೆ.

ಬಡವರಿಗಾಗಿ ಜನಪ್ರಿಯ ಯೋಜನೆಗಳನ್ನು ತಂದ ಸಿದ್ದರಾಮಯ್ಯ ಅವರ ಸಿದ್ಧರಾಮೋತ್ಸವ ಕಾರ್ಯಕ್ರಮದ ಯಶಸ್ಸಿನ ನಂತರ ಬಿಜೆಪಿಗರು ಹತಾಶರಾಗಿದ್ದು ಹೇಗಾದರೂ ಮಾಡಿ ಸಿದ್ದರಾಮಯ್ಯ ಅವರ ವರ್ಚಸನ್ನು ಹಾಳು ಮಾಡಬೇಕೆಂಬ ಉದ್ದೇಶದಿಂದ ಮಾಡಬೇಕಾದ ಅಭಿವೃದ್ಧಿ ಕೆಲಸ ಬಿಟ್ಟು ಇಂತಹ ಜನ ಮೆಚ್ಚದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆಂದು ರಮೇಶ್ ಕಾಂಚನ್ ತಿಳಿಸಿದರು.

ಪಠ್ಯಪುಸ್ತಕ ವಿವಾದ: ನಾರಾಯಣ ಗುರು ಪಾಠವನ್ನು ಸಮಾಜ ವಿಜ್ಞಾನಕ್ಕೆ ಸೇರಿಸಿ ಪ್ರತ್ಯೇಕ ಸುತ್ತೋಲೆ ಹೊರಡಿಸಿದ ಸರ್ಕಾರ – Vishwanews24

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

4 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

14 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

14 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

14 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago