Featured

ಉಡುಪಿ : ಸಿದ್ಧರಾಮೋತ್ಸವದ ಯಶಸ್ಸು, ಕಾಂಗ್ರೆಸ್ ನತ್ತ ಜನರ ಒಲವು ನೋಡಿ ಹತಾಶರಾದ ಬಿಜೆಪಿಗರು ಮೊಟ್ಟೆ ಎಸೆದಿದ್ದಾರೆ : ರಮೇಶ್‌ ಕಾಂಚನ್ – Vishwanews24

ಸಿದ್ಧರಾಮೋತ್ಸವದ ಯಶಸ್ಸು, ಕಾಂಗ್ರೆಸ್ ನತ್ತ ಜನರ ಒಲವು ನೋಡಿ ಹತಾಶರಾದ

ಬಿಜೆಪಿಗರು ಮೊಟ್ಟೆ ಎಸೆದಿದ್ದಾರೆ : ರಮೇಶ್‌ ಕಾಂಚನ್

ಉಡುಪಿ: ಸಿದ್ದರಾಮೋತ್ಸವದ ಅಭೂತಪೂರ್ವ ಯಶಸ್ಸು ಮತ್ತು ಕಾಂಗ್ರೆಸ್ ನತ್ತ ಜನರ ಒಲವು ನೋಡಿ ಹತಾಶರಾದ ಬಿಜೆಪಿಗರು ಕೊಡಗಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ಬಂದಿದ್ದ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆಯುವ ಪ್ರಯತ್ನ ಮಾಡಿದ್ದಾರೆಂದು ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

ಇಂದು ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿದೆ.ಜನರು ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಗಣೇಶೋತ್ಸವದ ಪೆಂಡಾಲಿಗೂ 18% ಜಿ.ಎಸ್.ಟಿ ಕೊಡಬೇಕಾಗದ ಪರಿಸ್ಥಿತಿಯನ್ನು ಸರಕಾರ ತಂದೊಡ್ಡಿದೆ. ಅಧಿಕಾರ ಯಂತ್ರ ಕುಸಿದು ಸರಕಾರ ವೈಫಲ್ಯದ ಹಾದಿಯಲ್ಲಿರುವಾಗ ಹತಾಶರಾದ ಬಿಜೆಪಿ ಕಾರ್ಯಕರ್ತರು ವಿರೋಧ ಪಕ್ಷ ನಾಯಕರ ಮೇಲೆ ಮೊಟ್ಟೆ ಎಸೆಯುವಂತಹ ಪ್ರಜಾಪ್ರಭುತ್ವ ಮೌಲ್ಯದ ವಿರುದ್ಧವಾದ ಕೃತ್ಯದಲ್ಲಿ ತೊಡಗಿಕೊಂಡಿದ್ದಾರೆ.

ಜೊತೆ ಜೊತೆಯಲಿ ನಾಯಕ ನಟ ಅನಿರುದ್ಧ್ ಗೆ 2 ವರ್ಷಗಳ ಕಾಲ ನಿಷೇಧ ಹೇರಿದ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ ..

ಕರಾವಳಿ ಭಾಗದಲ್ಲಿ ಅತೀವೃಷ್ಠಿಯಿಂದಾಗಿ ಅಂದಾಜು 250 ಕೋಟಿಗಿಂತ ಅಧಿಕ ನಷ್ಟವಾಗಿದೆ. ಮೀನುಗಾರರ ದೋಣಿ ನಾಶವಾಗಿದೆ. ಕೃಷಿ ಭೂಮಿ ಹಾಳಾಗಿದೆ. ಜನರ ಮನೆ, ತೋಟ ನಾಶವಾಗಿದೆ. ಅದರ ಕುರಿತು ಗಮನ ಹರಿಸಬೇಕಾದ ಆಡಳಿತರೂಢ ಬಿಜೆಪಿಗರು ಇಂದು ಕೇವಲ ಹದಿನೈದು ಕೋಟಿ ಪರಿಹಾರ ಘೋಷಿಸಿ ಕೈತೊಳೆದುಕೊಂಡಿದ್ದಾರೆ. ಜನರ ಗಮನ ಬೇರೆಡೆ ಹರಿಸಲು ಹಿಂದು-ಮುಸ್ಲಿಮ್ ಆಟದಲ್ಲಿ ತಲ್ಲೀನರಾಗಿದ್ದಾರೆ.

ಬಡವರಿಗಾಗಿ ಜನಪ್ರಿಯ ಯೋಜನೆಗಳನ್ನು ತಂದ ಸಿದ್ದರಾಮಯ್ಯ ಅವರ ಸಿದ್ಧರಾಮೋತ್ಸವ ಕಾರ್ಯಕ್ರಮದ ಯಶಸ್ಸಿನ ನಂತರ ಬಿಜೆಪಿಗರು ಹತಾಶರಾಗಿದ್ದು ಹೇಗಾದರೂ ಮಾಡಿ ಸಿದ್ದರಾಮಯ್ಯ ಅವರ ವರ್ಚಸನ್ನು ಹಾಳು ಮಾಡಬೇಕೆಂಬ ಉದ್ದೇಶದಿಂದ ಮಾಡಬೇಕಾದ ಅಭಿವೃದ್ಧಿ ಕೆಲಸ ಬಿಟ್ಟು ಇಂತಹ ಜನ ಮೆಚ್ಚದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆಂದು ರಮೇಶ್ ಕಾಂಚನ್ ತಿಳಿಸಿದರು.

ಪಠ್ಯಪುಸ್ತಕ ವಿವಾದ: ನಾರಾಯಣ ಗುರು ಪಾಠವನ್ನು ಸಮಾಜ ವಿಜ್ಞಾನಕ್ಕೆ ಸೇರಿಸಿ ಪ್ರತ್ಯೇಕ ಸುತ್ತೋಲೆ ಹೊರಡಿಸಿದ ಸರ್ಕಾರ – Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

8 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago