ಹಿರಿಯಡಕ: ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳಿಲ್ಲದ ಕಾರಣ ಪಂಚಾಯತ್ ಬಾಗಿಲು ಮುಚ್ಚಿದ್ದಾರೆ.
ಡಿ. 19 ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ, ಮಾನಸಿಕ ಕಿರುಕುಳದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರ ಸಲ್ಲಿಸಿದ್ದರು.
ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ, ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಜ.1ರ ಬುಧವಾರ ಸಿಬ್ಬಂದಿಗಳು ಗ್ರಾಮ ಪಂಚಾಯತ್ ಕಚೇರಿಗೆ ಹಾಜರಾಗಿಲ್ಲ.
ಸಿಬ್ಬಂದಿಗಳ ರಾಜೀನಾಮೆ ವಿಷಯ ತಿಳಿಯದೆ ತಮ್ಮ ಕೆಲಸಕ್ಕಾಗಿ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಸಾರ್ವಜನಿಕರು ಬಾಗಿಲಿಗೆ ಬೀಗ ಹಾಕಿರುವುದು ಕಂಡು ವಾಪಸ್ ಹೋಗುವಂತಾಗಿದೆ.
ಯಾವುದೇ ಮಾಹಿತಿ ನೀಡದೆ ಕಚೇರಿ ಬಾಗಿಲು ತೆರೆಯದೆ ಇರುವುದನ್ನು ಕಂಡ ಸಾರ್ವಜನಿಕರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…