ಹಿರಿಯಡಕ: ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳಿಲ್ಲದ ಕಾರಣ ಪಂಚಾಯತ್ ಬಾಗಿಲು ಮುಚ್ಚಿದ್ದಾರೆ.
ಡಿ. 19 ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ, ಮಾನಸಿಕ ಕಿರುಕುಳದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರ ಸಲ್ಲಿಸಿದ್ದರು.
ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ, ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಜ.1ರ ಬುಧವಾರ ಸಿಬ್ಬಂದಿಗಳು ಗ್ರಾಮ ಪಂಚಾಯತ್ ಕಚೇರಿಗೆ ಹಾಜರಾಗಿಲ್ಲ.
ಸಿಬ್ಬಂದಿಗಳ ರಾಜೀನಾಮೆ ವಿಷಯ ತಿಳಿಯದೆ ತಮ್ಮ ಕೆಲಸಕ್ಕಾಗಿ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಸಾರ್ವಜನಿಕರು ಬಾಗಿಲಿಗೆ ಬೀಗ ಹಾಕಿರುವುದು ಕಂಡು ವಾಪಸ್ ಹೋಗುವಂತಾಗಿದೆ.
ಯಾವುದೇ ಮಾಹಿತಿ ನೀಡದೆ ಕಚೇರಿ ಬಾಗಿಲು ತೆರೆಯದೆ ಇರುವುದನ್ನು ಕಂಡ ಸಾರ್ವಜನಿಕರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…