Featured

ಉಡುಪಿ : ಸುಂದರವಾಯಿತು ತ್ಯಾಜ್ಯ ಎಸೆಯುವ ಜಾಗ (Black Spot) : ಹೆಚ್ಚಿದ ಜನಸ್ಪಂದನ – Vishwanews24

ಉಡುಪಿ : ಸುಂದರವಾಯಿತು ತ್ಯಾಜ್ಯ ಎಸೆಯುವ ಜಾಗ (Black Spot) : ಹೆಚ್ಚಿದ ಜನಸ್ಪಂದನ – Vishwanews24

ಉಡುಪಿ ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಾರ್ವಜನಿಕ ಸ್ಥಳಗಳಲ್ಲಿ ಅದರಲ್ಲೂ ಮುಖ್ಯವಾಗಿ ರಸ್ತೆ, ಬಸ್ Stand ನದಿಯ ಪಕ್ಕದಲ್ಲಿ ತ್ಯಾಜ್ಯ ಎಸೆಯುವ ಜಾಗ ಗುರುತಿಸುವ (Garbage Black Spot Identification) ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕಿದ್ದು, ಜಿಲ್ಲೆಯಲ್ಲಿ ಇದುವರೆಗೆ 150 ಕ್ಕೂ ಹೆಚ್ಚು ಕಡೆಗಳಲ್ಲಿ Black Spot ನಿರ್ಮೂಲನಾ ಮಾಡಲಾಗಿದೆ.

ಈವರೆಗೆ ಒಟ್ಟು 55 ಕಡೆಗಳಲ್ಲಿ Black Spot ಇರುವ ಬಗ್ಗೆ WhatsApp number 9483330564 ಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ಇದರಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಭಾಗಕ್ಕೆ ಸೇರಿದ 42 'Black Spot ಗಳಿದ್ದು  ಅವುಗಳಲ್ಲಿ 40 ಅನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದೆ. ಉಳಿದಂತೆ ನಗರ ವ್ಯಾಪ್ತಿಗೆ ಸೇರಿದ Garbage Black Spot ಗಳನ್ನು ಸ್ವಚ್ಛಗೊಳಿಸುವ ಬಗ್ಗೆ ನಗರಸಭೆಗೆ ಮಾಹಿತಿ ನೀಡಲಾಗಿದೆ.

ಇದರೊಂದಿಗೆ ಸುಮಾರು 100 ಕ್ಕೂ ಹೆಚ್ಚು ಕಡೆಗಳಲ್ಲಿ ತ್ಯಾಜ್ಯ ಎಸೆಯುವ Black Spot ಗಳನ್ನು ಗ್ರಾಮ ಪಂಚಾಯತ್ ಗಳು ಸ್ವತಃ ಗುರುತಿಸಿದ್ದು, ಅದನ್ನು ಸ್ವಚ್ಛಗೊಳಿಸಿಲಾಗಿದ್ದು , ಬಹುತೇಕ ಕಡೆಗಳಲ್ಲಿ ಗಿಡ ನೆಡುವುದು, cctv ಅಳವಡಿಕೆ, ಬ್ಯಾನರ್, ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಕೋಟೇಶ್ವರ, ಕೋಡಿಬೆಟ್ಟು, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ಎಸೆಯುವ Black Spot ಗಳನ್ನು ನಿರ್ಮೂಲನಗೊಳಿಸುವ ಜೊತೆಗೆ ಕೆಲವಡೆ ಅದನ್ನು ಹೂದೋಟವಾಗಿ ಪರಿವರ್ತಿಸಿ ಅದಕ್ಕೆ ಕಲಾತ್ಮಕತೆಯ ಸ್ಪರ್ಶ ನೀಡಲಾಗಿದೆ.

ತ್ಯಾಜ್ಯ ಎಸೆಯುವ ಜಾಗವನ್ನು ಗುರುತಿಸಿ ಮಾಹಿತಿ ನೀಡುವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಅತ್ಯುತ್ತಮ ಸ್ಪಂದನೆ ದೊರೆತಿದ್ದು, ಕೆಲವು ಕಡೆಗಳಲ್ಲಿ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸುವುದರೊಂದಿಗೆ ಅವರಿಂದಲೇ ಸ್ವಚ್ಛತಾಕಾರ್ಯ ನಡೆಸುವ ಕಾರ್ಯವೂ ಭರದಿಂದ ನಡೆಯುತ್ತಿದೆ. ಸಿದ್ಧಾಪುರ ಗ್ರಾಮ ಪಂಚಾಯತ್ ನಲ್ಲಿ ಸ್ಮಶಾನದ ಬಳಿ ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿ 1000 ರೂ ದಂಡ ವಿಧಿಸಲಾಗಿದೆ. ಸಾಣೂರು ಗ್ರಾಮ ಪಂಚಾಯತ್ ನಲ್ಲಿ ರೂ. 2000 , ಬಡಾ ಗ್ರಾಮ ಪಂಚಾಯತ್ ನಲ್ಲಿ ರೂ 2000 ದಂಡ ವಿಧಿಸಲಾಗಿದೆ. ಕೋಡಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸದವರನ್ನು ಪತ್ತೆ ಹಚ್ಚಿ ಅವರಿಂದಲೇ ಕಸ ಹೆಕ್ಕಿಸುವ ಕಾರ್ಯವೂ ನಡೆದಿದೆ.

ಅಲೆವೂರು ಗ್ರಾಮ ಪಂಚಾಯತ್ ನಲ್ಲಿ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದವರನ್ನು ಪತ್ತೆ ಮಾಡಿ ಅವರಿಂದಲೇ ಕಸ ಹೆಕ್ಕಿಸಿ ರೂ 2000 ದಂಡ ಕೂಡ ವಿಧಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ಪೋಟೋ/ ಕಸ ತಂದು ಸುರಿಯುವ ವಾಹನಗಳ ಪೋಟೋ/ ಕಸ ಬಿದ್ದಿರುವ ಜಾಗದ ಪೋಟೋಗಳನ್ನು ಮತ್ತು ಸ್ಥಳದ ಮಾಹಿತಿಯನ್ನು WhatsApp ನಂಬರ್ 9483330564 ಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ನೀಡಿದವರಿಗೆ ಗ್ರಾಮ ಪಂಚಾಯತ್ ನಿಂದ ಸೂಕ್ತ ಬಹುಮಾನ ನೀಡಲಾಗುವುದು. ಹಾಗೂ ಈ ಮಾಹಿತಿ ನೀಡಿದವರ ಮೊಬೈಲ್ ಸಂಖ್ಯೆ ಮತ್ತು ಹೆಸರನ್ನು ಬಹಿರಂಗ ಪಡಿಸುವುದಿಲ್ಲ. ಜಿಲ್ಲೆಯಲ್ಲಿ Garbage Black Spot ನಿರ್ಮೂಲನಾ ಕಾರ್ಯ ನಿರಂತರ ಪ್ರಕ್ರಿಯೆಯಾಗಿದ್ದು, ಸಾರ್ವಜನಿಕರು ಬ್ಲಾಕ್ ಸ್ಪಾಟ್‌ಗಳ ಬಗ್ಗೆ ವಾಟ್ಸಾಪ್ ಮೂಲಕ ಮಾಹಿತಿ ನೀಡಿ “ನಮ್ಮ ಊರು ಸ್ವಚ್ಛ ಊರು“ ಅಭಿಯಾನವನ್ನು ಮತ್ತಷ್ಟು ಯಶಸ್ವಿಗೊಳಿಸಿ, ಇಡೀ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಮಾಡಲು ಸಹಕರಿಸಬೇಕು.

ಡಾ.ನವೀನ್ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಉಡುಪಿ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago