ಉಡುಪಿ: ಸುದ್ದಿವಾಹಿನಿಗಳ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸೇರುವ ಮೊದಲೇ ಕೊನೆಯುಸಿರೆಳೆದಿದ್ದಾರೆ. ಎದೆ ನೋವು ಬಂದ ಕೂಡಲೇ ನಗರದ ಮಿಷನ್ ಕಂಪೌಂಡ್ ನಲ್ಲಿರುವ ಲೋಂಬಾರ್ಡ್ ಆಸ್ಪತ್ರೆಗೆ ಸ್ನೇಹಿತನ ಜೊತೆ ತೆರಳಿದ್ದರು.
ವಿಪರೀತ ಎದೆನೋವು ಆದಾಗ ಕೂಡಲೇ ಆದರ್ಶ ಆಸ್ಪತ್ರೆಗೆ ಸ್ವತಃ ರವಿರಾಜ್ ಕರೆ ಮಾಡಿ ಬರುತ್ತಿರುವುದಾಗಿ ಹೇಳಿದ್ದಾರೆ. ಡಾ. ಚಂದ ಶೇಖರ್ ಅವರಿಗೆ ಕರೆ ಮಾಡಿದ ಕೂಡಲೇ ಕಾರಿನೊಳಗೆ ಕುಸಿದಿದ್ದಾರೆ. ಆಸ್ಪತ್ರೆ ಹೋಗುವ ಮೊದಲೇ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಡುಪಿಯಲ್ಲಿ ಈಟಿವಿ ವರದಿಗಾರನಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ಬೆಳವಣಿಗೆಗಳ ಹಿರಿಯ ವರದಿಗಾರನಾಗಿ ಕೆಲಸ ಮಾಡಿದ್ದರು. ಅದಾದ ಬಳಿಕ ಉಡುಪಿಯ ಸ್ಥಳೀಯ ವಾಹಿನಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ರವಿರಾಜ್ ಪತ್ನಿ, ಅವಳಿ- ಜವಳಿ ಪುತ್ರಿಯರನ್ನು ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನವರಾದ ರವಿರಾಜ್ ಅವರ ಅಂತ್ಯಕ್ರಿಯೆ ವಳಲಂಬೆಯಲ್ಲೇ ನಡೆಯಲಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…