Featured

ಉಡುಪಿ:  ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕಳ್ಳತನ ಪ್ರಕರಣ : ಮೂವರ ಬಂಧನ – VIshwanews24

ಉಡುಪಿ:  ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕಳ್ಳತನ ಪ್ರಕರಣ : ಮೂವರ ಬಂಧನ – VIshwanews24

ಉಡುಪಿ: ಜಿಲ್ಲೆಯ ಸುಲ್ತಾನ್ ಡೈಮಂಡ್ಸ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ಕಳೆದ ತಿಂಗಳು ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮೂಲದ ದಂಪತಿ ಸಹಿತ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಸೋಲಾಪುರ ನಯಿ ಝಿಂದಗಿ ನಿವಾಸಿಗಳಾದ ಆಸಿಫ್ ಅಸ್ಫಾಕ್ ಶೇಖ್ (32), ಆತನ ಪತ್ನಿ ನಾಝಿಯಾ (32), ಕುಂಬಾರಿ ಗ್ರಾಮದ ಸೌದಾಗರ್ ದಿಲೀಪ್ ಗೋಂದ್‌ ಕರ್(35) ಬಂಧಿತ ಆರೋಪಿಗಳು.

ನ.23ರಂದು ಇಬ್ಬರು ಬುರ್ಖಾ ಧರಿಸಿದ ಮಹಿಳೆಯವರು, ಓರ್ವ ವ್ಯಕ್ತಿ ಹಾಗೂ ಮಗುವಿನೊಂದಿಗೆ ಗ್ರಾಹಕರ ಸೋಗಿನಲ್ಲಿ ಉಡುಪಿಯ ಸುಲ್ತಾನ್ ಗೋಲ್ಡ್ ಗೆ ಬಂದು ಒಟ್ಟು 60 ಗ್ರಾಂ ತೂಕದ 3,00,000ರೂ. ಮೌಲ್ಯದ 4 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ತನಿಖೆ ನಡೆಸಿದ ಉಡುಪಿ ನಗರ ಪೊಲೀಸರು, ಜ್ಯುವೆಲ್ಲರಿ ಆಸುಪಾಸಿನ ಸಿಸಿಟಿವಿ ಪುಟೇಜ್ ಪರಿಶೀಲನೆ ನಡೆಸಿದಾಗ, ಎಂಎಚ್-13- ಎಫ್-4599ನೆ ನಂಬರಿನ ತವೇರಾ ಕಾರು ಕೃತ್ಯಕ್ಕೆ ಬಳಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದರು. ಹೀಗೆ ಆರೋಪಿಗಳ ಜಾಡು ಹಿಡಿದು ಮಹಾರಾಷ್ಟ್ರ ರಾಜ್ಯದ ಡಿ.18ರಂದು ಸೋಲಾಪುರಕ್ಕೆ ತೆರಳಿ ನಯಿ ಜಿಂದಗಿ ಎಂಬಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಡಿ.19ರಂದು ಠಾಣೆಗೆ ಹಾಜರುಪಡಿಸಲಾಗಿತು. ಬಂಧಿತರಿಂದ 1 ವಾಹನ, 1 ಮೊಬೈಲ್ ಹಾಗೂ 2,99,792 ರೂ. ಮೌಲ್ಯದ ನಾಲ್ಕು ಚಿನ್ನದ ಬಳೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉಡುಪಿ ಎಸ್ಪಿ ಎನ್.ವಿಷ್ಣುವರ್ಧನ್ ಆದೇಶದಂತೆ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಸುಧಾಕರ ನಾಯ್ಕ್ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್. ಎಸ್ಸೈ ವಾಸಪ್ಪ ನಾಯ್ಕ್, ಪ್ರೊಬೆಷನರಿ ಎಸ್ಸೈಗಳಾದ ಪ್ರಸಾದ, ಸುಹಾಸ್, ಸಿಬ್ಬಂದಿ ಸತೀಶ್, ಸಂತೋಷ್ ರಾಠೋಡ್, ಗಡ್ಡಯ್ಯ ಹೀರೆಮಠ್, ಮಲ್ಲಯ್ಯ, ನಾಗರತ್ನ, ಬಾಲಕೃಷ್ಣ, ಸುಷ್ಮ, ರಿಯಾಝ್ ಅಹ್ಮದ್, ಲೋಕೇಶ್, ಜೀವನ್ ಕುಮಾರ್, ಆನಂದ ಗಾಣಿಗ, ಹೇಮಂತ್, ಶಿವಕುಮಾರ್ ಹಾಗೂ ಚಾಲಕ ರಾಘವೇಂದ್ರ ಈ ಕಾರ್ಯಾಚರಣೆ ನಡೆಸಿದ್ದಾರೆ.

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago