ಉಡುಪಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಜನಪರ ಆಡಳಿತ ಹಾಗೂ ವಿನೂತನ ಯೋಜನೆಗಳಿಂದ ಕಂಗೆಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ದಿನದಿಂದ ದಿನಕ್ಕೆ ಕಾಂಗ್ರೆಸ್ ಅಧಪತನವನ್ನು ಕಂಡು ಹತಾಶೆಯ ಮನೋಭಾವದಿಂದ ಕಂಡ ಕಂಡಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡುವುದರಲ್ಲಿ ನಿಸ್ಸೀಮರು ಎನಿಸಿಕೊಂಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಹೇಳಿದೆ.
ರೈತರ ಆದಾಯ ದ್ವಿಗುಣಗೊಳಿಸುವ ಸದುದ್ದೇಶದಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ರೈತಸ್ನೇಹಿ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತರುವಲ್ಲಿ ಶ್ರಮಿಸಿದರೆ, ಕಾಂಗ್ರೆಸ್ ತನ್ನ ದೇಶ ವಿರೋಧಿ ನಡೆಯಿಂದ ರೈತರ ದಾರಿ ತಪ್ಪಿಸುವ ದುಷ್ಕತ್ಯದಲ್ಲಿ ನಿರತವಾಗಿದೆ. ನೈಜ ರೈತರಿಗೆ ಕೃಷಿ ಕಾಯ್ದೆಯ ಪರಿಣಾಮವಾಗಿ ಮಧ್ಯವರ್ತಿಗಳ ಹಾವಳಿಯಿಂದ ಮುಕ್ತಿ ದೊರೆಯುವ ಜೊತೆಗೆ ನೇರ ಮಾರುಕಟ್ಟೆ, ಬೆಂಬಲ ಬೆಲೆ ಇತ್ಯಾದಿ ಸೌಲಭ್ಯಗಳಿಂದ ಅನುಕೂಲವಾಗಿದೆ. ದೇಶದ ರಾಜಧಾನಿಯಲ್ಲಿ ರೈತ ಪ್ರತಿಭಟನೆಯ ಹೆಸರಲ್ಲಿ ಮಧ್ಯವರ್ತಿಗಳು, ನಕಲಿ ರೈತರು ಕೂಡಾ ಸೇರಿಕೊಂಡು ಯಾವ ರೀತಿಯ ದುಸ್ಸಾಹಸ ಮೆರೆದಿದ್ದಾರೆ ಎಂಬುದು ಜಗಜ್ಜಾಹೀರಾಗಿದೆ.
ಕೇಂದ್ರ ಸರಕಾರದ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅನುಷ್ಠಾನಗೊಂಡಿದ್ದು ಪ್ರತೀ ಕೆ.ಜಿ. ಅಕ್ಕಿಗೆ ರೂ.೨೯ರಂತೆ ಕೇಂದ್ರ ಸರಕಾರ ಭರಿಸುತ್ತಿದ್ದು ರಾಜ್ಯದ ಪಾಲು ರೂ.೩ ಮಾತ್ರ. ಆದಾಗ್ಯೂ ಅನ್ನಭಾಗ್ಯ ಯೋಜನೆಯ ಪುಕ್ಕಟೆ ಪ್ರಚಾರ ಪಡೆದದ್ದು ಮಾತ್ರ ಮಾಜಿ ಸಿ.ಎಂ. ಸಿದ್ಧರಾಮಯ್ಯ. ದೇಶದ ಪ್ರಧಾನಿಗೆ ಗೌರವ ಕೊಡಲಾಗದ ವಿರೋಧಿಗಳು ಸರಕಾರದ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಸಹಿಸದೆ ತೇಜೋವಧೆಯ ವಿಫಲ ಯತ್ನದಲ್ಲಿ ತೊಡಗಿರುವುದು ನಾಚಿಕೆಗೇಡಿನ ಸಂಗತಿ.
ಸುಪ್ರೀ ಕೋರ್ಟಿನ ತೀರ್ಪಿಗೆ ಅನುಗುಣವಾಗಿ ದೇಶದ ಕೋಟ್ಯಾಂತರ ಜನತೆಯ ಶೃದ್ಧಾ ಕೇಂದ್ರವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಗೊಳ್ಳುತ್ತಿರುವ ವಿಚಾರದಲ್ಲೂ ಸಿದ್ಧರಾಮಯ್ಯ ಅಪಸ್ವರ ಎತ್ತಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಜ್ವಲಂತ ಸಾಕ್ಷಿü. ಅಧಿಕಾರ ಮತ್ತು ಸ್ವಯಂ ಸ್ವಾರ್ಥ ಸಾಧನೆಗಾಗಿ ಧರ್ಮ ಜಾತಿಗಳ ನಡುವೆ ಕಂದಕ ಸೃಷ್ಠಿಸಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸಿದ್ಧರಾಮಯ್ಯ ನವರಿಂದ ಬಿಜೆಪಿಗೆ ನೈತಿಕತೆಯ ಪಾಠದ ಅಗತ್ಯವಿಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಹಾಗೂ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಮ್. ಅಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…