Featured

ಉಡುಪಿ : ಸುಳ್ಳು ಹೇಳಿ ಜನರನ್ನು ದಿಕ್ಕುತಪ್ಪಿಸುವುದು ಬಿಜೆಪಿಯ ಸಂಸ್ಕಾರ :  ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ : ಬಿಜೆಪಿ ಸರಕಾರ ಪ್ರಾಯೋಜಿತ ಯೋಜನೆಯಲ್ಲ..

ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಆಡಳಿತಾವಧಿಯ ಯು.ಪಿ.ಎ. ಸರಕಾರದ ಕಾಂಗ್ರೇಸ್ ಪಕ್ಷದ ಸಾಧನೆ ಹೊರತು ಬಿಜೆಪಿಯದ್ದಲ್ಲ..

ಸುಳ್ಳು ಹೇಳಿ ಜನರನ್ನು ದಿಕ್ಕುತಪ್ಪಿಸುವುದು ಬಿಜೆಪಿಯ ಸಂಸ್ಕಾರ :  ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಆಡಳಿತಾವಧಿಯ ಯು.ಪಿ.ಎ. ಸರಕಾರದ ಕಾಂಗ್ರೇಸ್ ಪಕ್ಷದ ಸಾಧನೆ ಹೊರತು ಬಿಜೆಪಿಯದ್ದಲ್ಲ. ಯುಪಿಎ ಆಡಳಿತಾವಧಿಯಲ್ಲಿ ಸೋನಿಯಾ ಗಾಂಧಿಯವರ ವಿಶೇಷ ಕಾಳಜಿಯೊಂದಿಗೆ 2009ರಲ್ಲಿ ಪ್ರಸ್ತಾವನೆಗೊಂಡ ಈ ಯೋಜನೆಯನ್ನು 2011 ಮತ್ತು 2012 ರಲ್ಲಿ ಬಹಳಷ್ಟು ತಿದ್ದುಪಡಿಯೊಂದಿಗೆ ಲೋಕಸಭೆಯಲ್ಲಿ ಮಂಡಿಸಿದಾಗಲೂ ಆಗ ವಿರೋಧ ಪಕ್ಷವಾಗಿದ್ದ ಈ ಬಿಜೆಪಿ ಈ ಮಸೂದೆ ಜ್ಯಾರಿಯಾಗದಂತೆ ನೋಡಿಕೊಂಡಿತ್ತು. ಮತ್ತೆ 2013ರ ಜುಲೈ ತಿಂಗಳಲ್ಲಿ ಅನ್ಯಪಕ್ಷಗಳ ಸಹಕಾರದೊಂದಿಗೆ ರಾಷ್ಟ್ರಪತಿಗಳು ಸಹಿ ಹಾಕುವ ಮೂಲಕ ಈ ಮಸೂದೆಯನ್ನು ಜ್ಯಾರಿಗೆ ತಂದಿತ್ತು. ಬಹುಶ: ಬಿಜೆಪಿಯ ಜಿಲ್ಲಾ ಅಧ್ಯಕ್ಷರನ್ನು ಈ ಬಗ್ಗೆ ಮಾಹಿತಿಯ ಕೊರತೆ ಕಾಡುತ್ತಿದೆ ಎಂದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.

2013 ರಲ್ಲಿ ದೇಶದ ಶೇ. 78 ಜನರಿಗೆ ಉಚಿತ ಆಹಾರ ಧಾನ್ಯ ಒದಗಿಸುವ ಗುರಿಯೊಂದಿಗೆ ಜ್ಯಾರಿಗೆ ಬಂದ ಈ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿಯಲ್ಲಿಯೇ ರಾಜ್ಯದ ಆಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅನ್ನಭಾಗ್ಯ, ಮಧ್ಯಾಹ್ನದ ಬಿಸಿಯೂಟ, ಇಂದಿರಾ ಕ್ಯಾಂಟಿನ್, ಕ್ಷೀರಭಾಗ್ಯವೇ ಮೊದಲಾದ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದರು. ಆಗಲೂ ಉಚಿತ ಆಹಾರ ಜನರನ್ನು ಉದಾಸೀನತೆಯೆಡೆಗೆ ದೂಡುತ್ತದೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದು ಬಿಜೆಪಿ ಸರಕಾರ ಪ್ರಾಯೋಜಿತ ಯೋಜನೆಯಲ್ಲ. ಸುಳ್ಳು ಹೇಳಿ ಜನರನ್ನು ದಿಕ್ಕುತಪ್ಪಿಸುವುದು ಬಿಜೆಪಿಯ ಸಂಸ್ಕಾರ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಶನಿವಾರದಿಂದ ಲಸಿಕೆಗಾಗಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ -Vishwanews24

ಇದು ಹೊರತುಪಡಿಸಿ ಆ ಅವಧಿಯಲ್ಲಿ ಯು.ಪಿ.ಎ. ಸರಕಾರ ಜ್ಯಾರಿಗೆ ತಂದ ಆಧಾರ್ ಕಾರ್ಡು, ಉದ್ಯೋಗ ಖಾತ್ರಿ ಯೋಜನೆಯೇ ಮೊದಲಾದ ಹತ್ತು ಹಲವು ಯೋಜನೆಗಳನ್ನು ಟೀಕಿಸುತ್ತಲೇ ಬಂದ ಬಿಜೆಪಿ ಇದೀಗ ಆ ಯೋಜನೆಗಳ ಹೆಸರು ಬದಲಿಸಿ, ತಮ್ಮದ್ದೇ ಯೋಜನೆಗಳೆಂದು ಹೇಳುತ್ತಿರುವುದು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಭೂಷಣ ಅಲ್ಲ. ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಇದಕ್ಕೊಂದು ಉದಾಹರಣೆ ಎಂದು ಅವರು ಹೇಳಿದ್ದಾರೆ.

ಕೋರೋನಾ ಆರ್ಥಿಕ ಸಂಕಷ್ಟವನ್ನು ಮುಂದಿರಿಸಿಕೊಂಡು, ಅನ್ನಭಾಗ್ಯ ಯೋಜನೆಯಡಿಯಲ್ಲಿ ಈಗಾಗಲೇ 7 ಕೆಜಿ ಇದ್ದ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದು, ಈಗ ಅದನ್ನು ಸತ್ವಯುತ ಆಹಾರ ನೀಡಿಕೆಯ ಅಪರಗುರಿಯೊಂದಿಗೆ ಅಕ್ಕಿಯನ್ನು 2 ಕೆಜಿಗೆ ಇಳಿಸಿ, ಅದರೊಂದಿಗೆ ರಾಗಿ ಮತ್ತು ಗೋಧಿಯನ್ನು ಕೊಡುವ ಬಗ್ಗೆ ಅಧಿಕಾರಿ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಇದರ ಹೊರತಾಗಿಯೂ ದೇಶಾದ್ಯಂತ ಕೋವಿಡ್ ಲಸಿಕೆಗಳ ಅಲಭ್ಯತೆ, ಆಕ್ಸಿಜನ್ ಮತ್ತು ರೇಂಡಮ್ಸಿವಿರ್ ಮಾತ್ರೆಗಳ ಕೊರತೆ ದೇಶದ ಕೊರೊನಾ ಭಾದಿತರನ್ನು ಆತಂಕದಲ್ಲಿರಿಸಿದೆ. ತನ್ನದ್ದೇ ಪಕ್ಷದ ಆಂತರಿಕ ವ್ಯವಹಾರ, ಅದೇ ಪಕ್ಷದ ಅಧ್ಯಕ್ಷರೊಬ್ಬರ ಗಮನಕ್ಕೆ ಬಾರದಿರುವುದು ವಿಷಾದನೀಯ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು ಮೂರ್ಖ ಸರ್ಕಾರ, ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ : ಕುಮಾರಸ್ವಾಮಿ -Vishwanews24

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago