Featured

ಉಡುಪಿ : ಸುಳ್ಳು ಹೇಳಿ ಜನರನ್ನು ದಿಕ್ಕುತಪ್ಪಿಸುವುದು ಬಿಜೆಪಿಯ ಸಂಸ್ಕಾರ :  ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ : ಬಿಜೆಪಿ ಸರಕಾರ ಪ್ರಾಯೋಜಿತ ಯೋಜನೆಯಲ್ಲ..

ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಆಡಳಿತಾವಧಿಯ ಯು.ಪಿ.ಎ. ಸರಕಾರದ ಕಾಂಗ್ರೇಸ್ ಪಕ್ಷದ ಸಾಧನೆ ಹೊರತು ಬಿಜೆಪಿಯದ್ದಲ್ಲ..

ಸುಳ್ಳು ಹೇಳಿ ಜನರನ್ನು ದಿಕ್ಕುತಪ್ಪಿಸುವುದು ಬಿಜೆಪಿಯ ಸಂಸ್ಕಾರ :  ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಆಡಳಿತಾವಧಿಯ ಯು.ಪಿ.ಎ. ಸರಕಾರದ ಕಾಂಗ್ರೇಸ್ ಪಕ್ಷದ ಸಾಧನೆ ಹೊರತು ಬಿಜೆಪಿಯದ್ದಲ್ಲ. ಯುಪಿಎ ಆಡಳಿತಾವಧಿಯಲ್ಲಿ ಸೋನಿಯಾ ಗಾಂಧಿಯವರ ವಿಶೇಷ ಕಾಳಜಿಯೊಂದಿಗೆ 2009ರಲ್ಲಿ ಪ್ರಸ್ತಾವನೆಗೊಂಡ ಈ ಯೋಜನೆಯನ್ನು 2011 ಮತ್ತು 2012 ರಲ್ಲಿ ಬಹಳಷ್ಟು ತಿದ್ದುಪಡಿಯೊಂದಿಗೆ ಲೋಕಸಭೆಯಲ್ಲಿ ಮಂಡಿಸಿದಾಗಲೂ ಆಗ ವಿರೋಧ ಪಕ್ಷವಾಗಿದ್ದ ಈ ಬಿಜೆಪಿ ಈ ಮಸೂದೆ ಜ್ಯಾರಿಯಾಗದಂತೆ ನೋಡಿಕೊಂಡಿತ್ತು. ಮತ್ತೆ 2013ರ ಜುಲೈ ತಿಂಗಳಲ್ಲಿ ಅನ್ಯಪಕ್ಷಗಳ ಸಹಕಾರದೊಂದಿಗೆ ರಾಷ್ಟ್ರಪತಿಗಳು ಸಹಿ ಹಾಕುವ ಮೂಲಕ ಈ ಮಸೂದೆಯನ್ನು ಜ್ಯಾರಿಗೆ ತಂದಿತ್ತು. ಬಹುಶ: ಬಿಜೆಪಿಯ ಜಿಲ್ಲಾ ಅಧ್ಯಕ್ಷರನ್ನು ಈ ಬಗ್ಗೆ ಮಾಹಿತಿಯ ಕೊರತೆ ಕಾಡುತ್ತಿದೆ ಎಂದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.

2013 ರಲ್ಲಿ ದೇಶದ ಶೇ. 78 ಜನರಿಗೆ ಉಚಿತ ಆಹಾರ ಧಾನ್ಯ ಒದಗಿಸುವ ಗುರಿಯೊಂದಿಗೆ ಜ್ಯಾರಿಗೆ ಬಂದ ಈ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿಯಲ್ಲಿಯೇ ರಾಜ್ಯದ ಆಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅನ್ನಭಾಗ್ಯ, ಮಧ್ಯಾಹ್ನದ ಬಿಸಿಯೂಟ, ಇಂದಿರಾ ಕ್ಯಾಂಟಿನ್, ಕ್ಷೀರಭಾಗ್ಯವೇ ಮೊದಲಾದ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದರು. ಆಗಲೂ ಉಚಿತ ಆಹಾರ ಜನರನ್ನು ಉದಾಸೀನತೆಯೆಡೆಗೆ ದೂಡುತ್ತದೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದು ಬಿಜೆಪಿ ಸರಕಾರ ಪ್ರಾಯೋಜಿತ ಯೋಜನೆಯಲ್ಲ. ಸುಳ್ಳು ಹೇಳಿ ಜನರನ್ನು ದಿಕ್ಕುತಪ್ಪಿಸುವುದು ಬಿಜೆಪಿಯ ಸಂಸ್ಕಾರ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರತಿಕ್ರಿಯಿಸಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಶನಿವಾರದಿಂದ ಲಸಿಕೆಗಾಗಿ ನೋಂದಾಯಿಸಿಕೊಳ್ಳುವುದಕ್ಕೆ ಅವಕಾಶ -Vishwanews24

ಇದು ಹೊರತುಪಡಿಸಿ ಆ ಅವಧಿಯಲ್ಲಿ ಯು.ಪಿ.ಎ. ಸರಕಾರ ಜ್ಯಾರಿಗೆ ತಂದ ಆಧಾರ್ ಕಾರ್ಡು, ಉದ್ಯೋಗ ಖಾತ್ರಿ ಯೋಜನೆಯೇ ಮೊದಲಾದ ಹತ್ತು ಹಲವು ಯೋಜನೆಗಳನ್ನು ಟೀಕಿಸುತ್ತಲೇ ಬಂದ ಬಿಜೆಪಿ ಇದೀಗ ಆ ಯೋಜನೆಗಳ ಹೆಸರು ಬದಲಿಸಿ, ತಮ್ಮದ್ದೇ ಯೋಜನೆಗಳೆಂದು ಹೇಳುತ್ತಿರುವುದು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಭೂಷಣ ಅಲ್ಲ. ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಇದಕ್ಕೊಂದು ಉದಾಹರಣೆ ಎಂದು ಅವರು ಹೇಳಿದ್ದಾರೆ.

ಕೋರೋನಾ ಆರ್ಥಿಕ ಸಂಕಷ್ಟವನ್ನು ಮುಂದಿರಿಸಿಕೊಂಡು, ಅನ್ನಭಾಗ್ಯ ಯೋಜನೆಯಡಿಯಲ್ಲಿ ಈಗಾಗಲೇ 7 ಕೆಜಿ ಇದ್ದ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದು, ಈಗ ಅದನ್ನು ಸತ್ವಯುತ ಆಹಾರ ನೀಡಿಕೆಯ ಅಪರಗುರಿಯೊಂದಿಗೆ ಅಕ್ಕಿಯನ್ನು 2 ಕೆಜಿಗೆ ಇಳಿಸಿ, ಅದರೊಂದಿಗೆ ರಾಗಿ ಮತ್ತು ಗೋಧಿಯನ್ನು ಕೊಡುವ ಬಗ್ಗೆ ಅಧಿಕಾರಿ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಇದರ ಹೊರತಾಗಿಯೂ ದೇಶಾದ್ಯಂತ ಕೋವಿಡ್ ಲಸಿಕೆಗಳ ಅಲಭ್ಯತೆ, ಆಕ್ಸಿಜನ್ ಮತ್ತು ರೇಂಡಮ್ಸಿವಿರ್ ಮಾತ್ರೆಗಳ ಕೊರತೆ ದೇಶದ ಕೊರೊನಾ ಭಾದಿತರನ್ನು ಆತಂಕದಲ್ಲಿರಿಸಿದೆ. ತನ್ನದ್ದೇ ಪಕ್ಷದ ಆಂತರಿಕ ವ್ಯವಹಾರ, ಅದೇ ಪಕ್ಷದ ಅಧ್ಯಕ್ಷರೊಬ್ಬರ ಗಮನಕ್ಕೆ ಬಾರದಿರುವುದು ವಿಷಾದನೀಯ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು ಮೂರ್ಖ ಸರ್ಕಾರ, ಇನ್ನೂ ಕೂಡಾ ಇವರಿಗೆ ಬುದ್ದಿ ಬಂದಿಲ್ಲ : ಕುಮಾರಸ್ವಾಮಿ -Vishwanews24

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

15 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

15 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

15 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

18 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

18 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 hours ago