ಮಣಿಪಾಲ: ಕೇಂದ್ರ ಸರಕಾರ ಈಗಾಗಲೇ ಮಂಜೂರು ಮಾಡಿರುವ ಇಎಸ್ಐ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದರು.
ಆಸ್ಪತ್ರೆ ನಿರ್ಮಾಣಕ್ಕೆ ವಾರಂಬಳ್ಳಿಯಲ್ಲಿ ಮೀಸಲಿಟ್ಟಿರುವ ಸುಮಾರು 6 ಎಕ್ರೆ ಜಾಗಕ್ಕೆ ಬುಧವಾರ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನಂತರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಸಭೆ ನಡೆಸಿದರು.
150 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಇಎಸ್ಐ ಆಸ್ಪತ್ರೆಯ ಸಂಬಂಧ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಸುಸಜ್ಜಿತ ಆಸ್ಪತ್ರೆ ಶೀಘ್ರದಲ್ಲೇ ನಿರ್ಮಾಣವಾಗಲಿದೆ. 32 ವಸತಿ ಗೃಹಗಳನ್ನು ಒಳಗೊಂಡು 100 ಬೆಡ್ನ ಆಸ್ಪತ್ರೆ ಇದಾಗಿದೆ ಎಂದರು.
ಹಿಂದೆ ಸಂಸದರಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಶಿಫಾರಸಿನಂತೆ ಆಸ್ಪತ್ರೆ ಮಂಜೂರಾಗಿದ್ದು, ಅದರಂತೆ ಈಗ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. 100 ಬೆಡ್ನ ಆಸ್ಪತ್ರೆ ನಿರ್ಮಾಣವಾಗುತ್ತಿದ್ದಂತೆ ಕಾರ್ಮಿಕ ವರ್ಗಕ್ಕೆ ಇದರಿಂದ ಅನುಕೂಲವಾಗಲಿದೆ. ಉಡುಪಿ, ಕುಂದಾಪುರ, ಮಣಿಪಾಲ, ಕಾರ್ಕಳ ಹಾಗೂ ಪಡುಬಿದ್ರಿಯಲ್ಲಿರುವ ಇಎಸ್ಐ ಔಷಧಾಲಯಗಳಿಗೆ ವೈದ್ಯರನ್ನು ಕೂಡಲೇ ಒದಗಿಸುವಂತೆ ಸೂಚಿಸಲಾಯಿತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…