ಮಣಿಪಾಲ: ಕೇಂದ್ರ ಸರಕಾರ ಈಗಾಗಲೇ ಮಂಜೂರು ಮಾಡಿರುವ ಇಎಸ್ಐ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದರು.
ಆಸ್ಪತ್ರೆ ನಿರ್ಮಾಣಕ್ಕೆ ವಾರಂಬಳ್ಳಿಯಲ್ಲಿ ಮೀಸಲಿಟ್ಟಿರುವ ಸುಮಾರು 6 ಎಕ್ರೆ ಜಾಗಕ್ಕೆ ಬುಧವಾರ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನಂತರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಸಭೆ ನಡೆಸಿದರು.
150 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಇಎಸ್ಐ ಆಸ್ಪತ್ರೆಯ ಸಂಬಂಧ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಸುಸಜ್ಜಿತ ಆಸ್ಪತ್ರೆ ಶೀಘ್ರದಲ್ಲೇ ನಿರ್ಮಾಣವಾಗಲಿದೆ. 32 ವಸತಿ ಗೃಹಗಳನ್ನು ಒಳಗೊಂಡು 100 ಬೆಡ್ನ ಆಸ್ಪತ್ರೆ ಇದಾಗಿದೆ ಎಂದರು.
ಹಿಂದೆ ಸಂಸದರಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಶಿಫಾರಸಿನಂತೆ ಆಸ್ಪತ್ರೆ ಮಂಜೂರಾಗಿದ್ದು, ಅದರಂತೆ ಈಗ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. 100 ಬೆಡ್ನ ಆಸ್ಪತ್ರೆ ನಿರ್ಮಾಣವಾಗುತ್ತಿದ್ದಂತೆ ಕಾರ್ಮಿಕ ವರ್ಗಕ್ಕೆ ಇದರಿಂದ ಅನುಕೂಲವಾಗಲಿದೆ. ಉಡುಪಿ, ಕುಂದಾಪುರ, ಮಣಿಪಾಲ, ಕಾರ್ಕಳ ಹಾಗೂ ಪಡುಬಿದ್ರಿಯಲ್ಲಿರುವ ಇಎಸ್ಐ ಔಷಧಾಲಯಗಳಿಗೆ ವೈದ್ಯರನ್ನು ಕೂಡಲೇ ಒದಗಿಸುವಂತೆ ಸೂಚಿಸಲಾಯಿತು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…