Featured

ಉಡುಪಿ: ಸೂಕ್ತ ಪರವಾನಗಿ ಇಲ್ಲದ ಪಟಾಕಿ ದಾಸ್ತಾನು ಅಂಗಡಿಗೆ ಪೋಲಿಸರ ದಾಳಿ ; 40 ಕೆ.ಜಿ. ಪಟಾಕಿ ವಶಕ್ಕೆ – vishwanews24

ಉಡುಪಿ: ಸೂಕ್ತ ಪರವಾನಗಿ ಇಲ್ಲದ ಪಟಾಕಿ ದಾಸ್ತಾನು ಅಂಗಡಿಗೆ ಪೋಲಿಸರ ದಾಳಿ ;  40 ಕೆ.ಜಿ. ಪಟಾಕಿ ವಶಕ್ಕೆ

ಪಟಾಕಿ ದಾಸ್ತಾನು ಅಂಗಡಿಗೆ ಪೋಲಿಸರ ದಾಳಿ ;

ಉಡುಪಿ : ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ 40 ಕೆ.ಜಿ. ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿ ನಗರದ ಜಿಟಿಎಸ್ ಶಾಲೆಯ ಎದುರಿನ ವಿದ್ಯಾಜ್ಯೋತಿ ಕಟ್ಟಡದಲ್ಲಿರುವ ಕಬ್ರಾಲ್ ಗನ್ ಹೌಸ್ ನಡೆದಿದೆ.

ಉಡುಪಿ ನಗರ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ನೀಡಿದ ಸುಳಿವಿನ ಮೇರೆಗೆ ಕಬ್ರಾಲ್ ಗನ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಸೂಕ್ತ ಪರವಾನಗಿ ಇಲ್ಲದೆ ಸಂಗ್ರಹಿಸಿಟ್ಟಿದ್ದ ಪಟಾಕಿಗಳ ದಾಸ್ತಾನು ಪತ್ತೆಯಾಗಿದೆ.

ದಾಳಿ ವೇಳೆ ಸ್ಥಳದಲ್ಲಿದ್ದ ರೊನಾಲ್ಡ್ ಜಿ ಕ್ಯಾಬ್ರಾಲ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಆವರಣದಲ್ಲಿದ್ದ ಒಟ್ಟು 40 ಕೆ.ಜಿ. ಪಟಾಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರೊನಾಲ್ಡ್ ಜಿ. ಕ್ಯಾಬ್ರಾಲ್ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೆ ಈ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದು, ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಅಪಾಯಕಾರಿಯಾಗಿದೆ. ಇನ್ನು ಪರವಾನಗಿ ಇಲ್ಲದಿರುವುದರಿಂದ ಈ ಸ್ಫೋಟಕಗಳ ಶೇಖರಣೆಯು ಕಾನೂನುಬಾಹಿರ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

17 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

18 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

18 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

18 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

19 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

19 hours ago