Featured

ಉಡುಪಿ: ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ನಾಮ ನಿರ್ದೇಶಿತ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ – Vishwanews24

ಉಡುಪಿ: ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್ಆಡಳಿತ ಸಮಿತಿ ನಾಮ ನಿರ್ದೇಶಿತ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ

ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಶಿಫಾರಸು ಮೇರೆಗೆ‌‌ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರ ಸರಕಾರದ ಸ್ವಾಮ್ಯದ “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್‌‌” ಗೋವಾ ಇದರ‌ ‘ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ’ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ‘ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್’ ನವದೆಹಲಿ‌‌ ಆದೇಶ ಹೊರಡಿಸಿದೆ.

ಇವರು ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ತಲಾ ಎರಡು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಅಂಬಲಪಾಡಿ ಸ್ಥಾನೀಯ ಸಮಿತಿ ಕಾರ್ಯದರ್ಶಿಯಾಗಿ, ಬಿಜೆಪಿ ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾಗಿ, ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಪ್ತಸಕ್ತ ಎರಡನೇ ಅವಧಿಗೆ ಬಿಜೆಪಿ ಜಿಲ್ಲಾ ಸಹ ವಕ್ತಾರರಾಗಿ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ : Zee Kannada ರಿಯಾಲಿಟಿ ಶೋ ನಲ್ಲಿ ನಡೆದ ಡ್ಯಾನ್ಸ್‌ ಸ್ಪರ್ಧೆಯಲ್ಲಿ ಯಕ್ಷಗಾನಕ್ಕೆ ಅವಮಾನ..

ಕರ್ನಾಟಕ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಇದರ ಜತೆ ಕಾರ್ಯದರ್ಶಿಯಾಗಿ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ.) ಇದರ ಗೌರವ ಸಲಹೆಗಾರರಾಗಿ, ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ರೋಟರಿ ಕ್ಲಬ್ ಅಂಬಲಪಾಡಿ ಇದರ ಅತ್ಯುತ್ತಮ ಕ್ಲಬ್ ಪ್ರಶಸ್ತಿ ವಿಜೇತ ಕಾರ್ಯದರ್ಶಿಯಾಗಿ, ರೋಟರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಉಪಾಧ್ಯಕ್ಷರಾಗಿ, ಬಾಡಿ ಬಿಲ್ಡಿಂಗ್‌ ರಾಜ್ಯ ತೀರ್ಪುಗಾರರಾಗಿ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ಆಡಳಿತ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷರಾಗಿ, ಶ್ರೀ ಬಬ್ಬುಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಶ್ರೀ ರಾಮಾಂಜನೇಯ ಪೂಜಾ ಮಂದಿರ ಅಂಬಲಪಾಡಿ ಇದರ ಸಂಚಾಲಕರಾಗಿ, ಅಂಗನವಾಡಿ ಕೇಂದ್ರ ಬಂಕೇರ್ಕಟ್ಟ ಅಂಬಲಪಾಡಿ ಇದರ ಬಾಲವಿಕಾಸ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುವ ಜೊತೆಗೆ ಮಣಿಪಾಲ ಸಮೂಹ ಸಂಸ್ಥೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

59 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

1 hour ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 hour ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago