ಉಡುಪಿ: ಕೊರೋನ ವೈರಸ್ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಹಾಗೂ ಜಿಲ್ಲಾಡಳಿತಗಳ ಆದೇಶಗಳನ್ನು ಉಲ್ಲಂಘಿಸಿ ಸಂತೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ, ಹರಕೆಯ ಆಟವಾಗಲಿ, ಯಕ್ಷಗಾನ ಬಯಲಾಟಗಳಾಗಲಿ ನಡೆಸಿದ್ದಲ್ಲಿ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದ್ದು, ಸಾರ್ವಜನಿಕರು ತುರ್ತು ಅಗತ್ಯದ ಹೊರತು ಯಾವುದೇ ಕಾರಣಕ್ಕೂ ಸರಕಾರಿ ಕಚೇರಿಗಳಿಗೆ ಬರುವುದು ಬೇಡ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 10, ಜಿಲ್ಲಾಸ್ಪತ್ರೆಯಲ್ಲಿ 10, ಕುಂದಾಪುರ ಹಾಗೂ ಕಾರ್ಕಳ ಆಸ್ಪತ್ರೆಯಲ್ಲಿ ತಲಾ 5 ಐಸೋಲೇಟೆಡ್ ವಾರ್ಡ್ಗಳಿವೆ. ಜತೆಗೆ ಜಿಲ್ಲೆಯ ಎಲ್ಲ ಆಸ್ಪತ್ರೆಯಲ್ಲಿ ಎರಡು ಬೆಡ್ ವಾರ್ಡ್ ತೆರೆಯುವಂತೆ ಸೂಚನೆ ನೀಡಲಾಗಿದೆ. ತುರ್ತು ಚಿಕಿತ್ಸೆ ಬೇಕಾದವರು ಮಾತ್ರ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು ಎಂದು ಮನವಿ ಮಾಡಿದರು.
ಉಡುಪಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 21 ಶಂಕಿತ ವ್ಯಕ್ತಿಗಳ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. 16 ಮಂದಿಯ ವರದಿ ಬಂದಿದ್ದು, ನೆಗೆಟಿವ್ ಆಗಿವೆ. ಬಾಕಿ ಇರುವ 5 ವರದಿ ಇನ್ನಷ್ಟೇ ಬರಬೇಕಿದೆ. ಮಾ. 19ರಂದು ಹೊಸದಾಗಿ ಕುಂದಾಪುರ ಆಸ್ಪತ್ರೆ, ಜಿಲ್ಲಾಸ್ಪತ್ರೆ ಹಾಗೂ ಕಸ್ತುರ್ಬಾ ಆಸ್ಪತ್ರೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಇವರು ಜರ್ಮನಿ, ಯುಎಇ, ದುಬಾೖಯಿಂದ ಬಂದವರಾಗಿದ್ದಾರೆ. ಅವರು ಗಂಟಲ ದ್ರವವನ್ನು ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್ಚಂದ್ರ ಸೂಡಾ ತಿಳಿಸಿದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…