ಉಡುಪಿ: ಸೆಲೂನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬಡಗುಬೆಟ್ಟುವಿನ ಪ್ರವೀಣ್(22), ಕಟಪಾಡಿಯ ಅಭಿಷೇಕ್(28), ಪುತ್ತೂರು ಗ್ರಾಮದ ದೇಶ್ ರಾಜ್(18) ಎನ್ನಲಾಗಿದೆ.
ಪುತ್ತೂರು ಸಲೂನ್ ನಲ್ಲಿ ನೌಕರನಾಗಿರುವ ಚರಣ್ ಎಂಬಾತ ಶಬರಿ ಎಂಬಾತನಿಗೆ ಬೈದಿದ್ದ ಎನ್ನಲಾಗಿದೆ ಇದೇ ವಿಚಾರವಾಗಿ ಪ್ರವೀಣ್ ಗ್ಯಾಂಗ್ ಚರಣ್ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದೆ. ಅದರಂತೆ ಚರಣ್ ತನ್ನ ಮೂವರು ಸ್ನೇಹಿತರೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್ ಗ್ಯಾಂಗ್ ಮಾತುಕತೆಗೆಂದು ಬಂದ ಚರಣ್ ಮತ್ತು ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಲು ಯತ್ನಿಸಿದೆ ಇದನ್ನು ಕಂಡ ಚರಣ್ ಮತ್ತು ಸ್ನೇಹಿತರು ಬೈಕ್ ಅಲ್ಲೇ ಬಿಟ್ಟು ಪ್ರವೀಣ್ ಗ್ಯಾಂಗ್ ನಡೆಸಿದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಇದಾದ ಬಳಿಕ ಪ್ರವೀಣ್ ಗ್ಯಾಂಗ್ ಚರಣ್ ಹಾಗೂ ಸ್ನೇಹಿತರು ಬಿಟ್ಟು ಹೋದ ಬೈಕ್ ಹಾಗೂ ಸ್ಕೂಟಿಯನ್ನು ಪುಡಿಗೈದಿದ್ದರು.
ಈ ಕುರಿತು ಪ್ರಕರಣ ದಾಖಲಾಗಿತ್ತು ಅದರಂತೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…