Featured

ಉಡುಪಿ: ಸೆಲೂನ್‌ ಸಿಬಂದಿಯ ಕೊಲೆ ಯತ್ನ ; ತಲವಾರಿನಿಂದ ಹಲ್ಲೆ – vishwanews24

ಉಡುಪಿ: ಸೆಲೂನ್‌ ಸಿಬಂದಿಯ ಕೊಲೆ ಯತ್ನ ; ತಲವಾರಿನಿಂದ ಹಲ್ಲೆ

ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ಕೊಲೆಯತ್ನ ನಡೆಸಲು ಯತ್ನಿಸಿದ ಘಟನೆ ನಡೆದಿದೆ.

ಉಡುಪಿಯ ಪುತ್ತೂರಿನ ಸೆಲೂನ್‌ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್‌ ಯು. (18) ಹಲ್ಲೆಗೊಳಗಾದವರು. ಜೂ. 15ರಂದು ಸೆಲೂನ್‌ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದ ವೇಳೆ ಅಭಿ ಕಟಪಾಡಿ ಅವರು ಕರೆ ಮಾಡಿ ಶಬರಿ ಎಂಬವನ ಬಗ್ಗೆ ಮಾತನಾಡಬೇಕಾಗಿದೆ.

ತತ್‌ಕ್ಷಣ ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಬರುವಂತೆ ತಿಳಿಸಿದ್ದಾನೆ. ಅದರಂತೆ ಚರಣ್‌ ಅವರು ಸುಜನ್‌ ಎಂಬಾತನ ಬೈಕ್‌ನಲ್ಲಿ ಹೋಗಿದ್ದರು. ಇವರ ಗೆಳೆಯರಾದ ನಾಗರಾಜ್‌, ಕಾರ್ತಿಕ್‌, ರಂಜು ಅವರು ಮತ್ತೂಂದು ಸ್ಕೂಟಿಯಲ್ಲಿ ಹೊರಟು ಬಿರಿಯಾನಿ ಪಾಯಿಂಟ್‌ ಗಿಂತ ಸ್ವಲ್ಪ ಮುಂದೆ ಗೂಡಂಗಡಿ ಬಳಿಗೆ ತೆರಳಿದ್ದರು. ಈ ವೇಳೆ ಪ್ರವೀಣ, ಅಭಿ ಕಟಪಾಡಿ, ದೇಶರಾಜ್‌, ಶಬರಿ ಮತ್ತು ಪರಿಚಯವಿಲ್ಲದ ಇತರ ಇಬ್ಬರು ಅಲ್ಲಿಯೇ ನಿಂತಿದ್ದ ರಿûಾಕ್ಕೆ ಒರಗಿಕೊಂಡು, ಕೈಯಲ್ಲಿ ತಲವಾರು ಹಿಡಿದುಕೊಂಡು ನಿಂತಿದ್ದರು.

ಚರಣ್‌ ಮತ್ತು ಆತನ ಗೆಳೆಯರನ್ನು ನೋಡಿದ ತತ್‌ಕ್ಷಣ ಕೊಲ್ಲುವ ಉದ್ದೇಶದಿಂದ ಎದುರು ಬಂದು ತಲವಾರು ಬೀಸಿದ್ದು, ಬೈಕ್‌ ಮತ್ತು ಸ್ಕೂಟಿಯನ್ನು ಅಲ್ಲಿಯೇ ಬಿಟ್ಟು ಅವರಿಂದ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿಯರ್‌ ಬಾಟಲಿಗಳನ್ನು ಬಿಸಾಡಿದ್ದಾರೆ. ಅನಂತರ ರಾತ್ರಿ 10 ಗಂಟೆಗೆ ಚರಣ್‌ ಹಾಗೂ ಸ್ನೇಹಿತರು ಪುನಃ ತಾವು ಬಿಟ್ಟು ಹೋಗಿದ್ದ ಬೈಕ್‌ ಹಾಗೂ ಸ್ಕೂಟಿಯನ್ನು ಕೊಂಡು ಹೋಗಲು ಹೋದಾಗ ಆರೋಪಿಗಳು ಇವರ ದ್ವಿಚಕ್ರ ವಾಹನವನ್ನು ಹಾನಿಗೊಳಿಸಿ 25 ಸಾವಿರ ರೂ. ನಷ್ಟ ಉಂಟು ಮಾಡಿದ್ದಾರೆ.

ಸುಜನ್‌ನ ಸ್ಕೂಟಿಯನ್ನು ದೂಡಿ ಹಾಕಿದ್ದಾರೆ. ಶಬರಿ ಎಂಬವನಿಗೆ ಚರಣ್‌ ನಿಂದಿಸಿದ ಕಾರಣ ಮುಂದಿಟ್ಟುಕೊಂಡು, ಹಳೇ ದ್ವೇಷದಿಂದ ಪ್ರವೀಣ್‌ ಮತ್ತು ಇತರ 5 ಮಂದಿ ಸೇರಿ ಕೊಲ್ಲುವ ಉದ್ದೇಶದಿಂದ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ ಎಂದು ನಗರ ಠಾಣೆಯಲ್ಲಿ ಚರಣ್‌ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago