Featured

ಉಡುಪಿ: ಸೆಲೂನ್‌ ಸಿಬಂದಿಯ ಕೊಲೆ ಯತ್ನ ; ತಲವಾರಿನಿಂದ ಹಲ್ಲೆ – vishwanews24

ಉಡುಪಿ: ಸೆಲೂನ್‌ ಸಿಬಂದಿಯ ಕೊಲೆ ಯತ್ನ ; ತಲವಾರಿನಿಂದ ಹಲ್ಲೆ

ಉಡುಪಿ: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ಕೊಲೆಯತ್ನ ನಡೆಸಲು ಯತ್ನಿಸಿದ ಘಟನೆ ನಡೆದಿದೆ.

ಉಡುಪಿಯ ಪುತ್ತೂರಿನ ಸೆಲೂನ್‌ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್‌ ಯು. (18) ಹಲ್ಲೆಗೊಳಗಾದವರು. ಜೂ. 15ರಂದು ಸೆಲೂನ್‌ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದ ವೇಳೆ ಅಭಿ ಕಟಪಾಡಿ ಅವರು ಕರೆ ಮಾಡಿ ಶಬರಿ ಎಂಬವನ ಬಗ್ಗೆ ಮಾತನಾಡಬೇಕಾಗಿದೆ.

ತತ್‌ಕ್ಷಣ ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಬರುವಂತೆ ತಿಳಿಸಿದ್ದಾನೆ. ಅದರಂತೆ ಚರಣ್‌ ಅವರು ಸುಜನ್‌ ಎಂಬಾತನ ಬೈಕ್‌ನಲ್ಲಿ ಹೋಗಿದ್ದರು. ಇವರ ಗೆಳೆಯರಾದ ನಾಗರಾಜ್‌, ಕಾರ್ತಿಕ್‌, ರಂಜು ಅವರು ಮತ್ತೂಂದು ಸ್ಕೂಟಿಯಲ್ಲಿ ಹೊರಟು ಬಿರಿಯಾನಿ ಪಾಯಿಂಟ್‌ ಗಿಂತ ಸ್ವಲ್ಪ ಮುಂದೆ ಗೂಡಂಗಡಿ ಬಳಿಗೆ ತೆರಳಿದ್ದರು. ಈ ವೇಳೆ ಪ್ರವೀಣ, ಅಭಿ ಕಟಪಾಡಿ, ದೇಶರಾಜ್‌, ಶಬರಿ ಮತ್ತು ಪರಿಚಯವಿಲ್ಲದ ಇತರ ಇಬ್ಬರು ಅಲ್ಲಿಯೇ ನಿಂತಿದ್ದ ರಿûಾಕ್ಕೆ ಒರಗಿಕೊಂಡು, ಕೈಯಲ್ಲಿ ತಲವಾರು ಹಿಡಿದುಕೊಂಡು ನಿಂತಿದ್ದರು.

ಚರಣ್‌ ಮತ್ತು ಆತನ ಗೆಳೆಯರನ್ನು ನೋಡಿದ ತತ್‌ಕ್ಷಣ ಕೊಲ್ಲುವ ಉದ್ದೇಶದಿಂದ ಎದುರು ಬಂದು ತಲವಾರು ಬೀಸಿದ್ದು, ಬೈಕ್‌ ಮತ್ತು ಸ್ಕೂಟಿಯನ್ನು ಅಲ್ಲಿಯೇ ಬಿಟ್ಟು ಅವರಿಂದ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿಯರ್‌ ಬಾಟಲಿಗಳನ್ನು ಬಿಸಾಡಿದ್ದಾರೆ. ಅನಂತರ ರಾತ್ರಿ 10 ಗಂಟೆಗೆ ಚರಣ್‌ ಹಾಗೂ ಸ್ನೇಹಿತರು ಪುನಃ ತಾವು ಬಿಟ್ಟು ಹೋಗಿದ್ದ ಬೈಕ್‌ ಹಾಗೂ ಸ್ಕೂಟಿಯನ್ನು ಕೊಂಡು ಹೋಗಲು ಹೋದಾಗ ಆರೋಪಿಗಳು ಇವರ ದ್ವಿಚಕ್ರ ವಾಹನವನ್ನು ಹಾನಿಗೊಳಿಸಿ 25 ಸಾವಿರ ರೂ. ನಷ್ಟ ಉಂಟು ಮಾಡಿದ್ದಾರೆ.

ಸುಜನ್‌ನ ಸ್ಕೂಟಿಯನ್ನು ದೂಡಿ ಹಾಕಿದ್ದಾರೆ. ಶಬರಿ ಎಂಬವನಿಗೆ ಚರಣ್‌ ನಿಂದಿಸಿದ ಕಾರಣ ಮುಂದಿಟ್ಟುಕೊಂಡು, ಹಳೇ ದ್ವೇಷದಿಂದ ಪ್ರವೀಣ್‌ ಮತ್ತು ಇತರ 5 ಮಂದಿ ಸೇರಿ ಕೊಲ್ಲುವ ಉದ್ದೇಶದಿಂದ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ ಎಂದು ನಗರ ಠಾಣೆಯಲ್ಲಿ ಚರಣ್‌ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago