ಉಡುಪಿ: ಸೆಲೂನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ಕೊಲೆಯತ್ನ ನಡೆಸಲು ಯತ್ನಿಸಿದ ಘಟನೆ ನಡೆದಿದೆ.
ಉಡುಪಿಯ ಪುತ್ತೂರಿನ ಸೆಲೂನ್ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್ ಯು. (18) ಹಲ್ಲೆಗೊಳಗಾದವರು. ಜೂ. 15ರಂದು ಸೆಲೂನ್ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದ ವೇಳೆ ಅಭಿ ಕಟಪಾಡಿ ಅವರು ಕರೆ ಮಾಡಿ ಶಬರಿ ಎಂಬವನ ಬಗ್ಗೆ ಮಾತನಾಡಬೇಕಾಗಿದೆ.
ತತ್ಕ್ಷಣ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಬರುವಂತೆ ತಿಳಿಸಿದ್ದಾನೆ. ಅದರಂತೆ ಚರಣ್ ಅವರು ಸುಜನ್ ಎಂಬಾತನ ಬೈಕ್ನಲ್ಲಿ ಹೋಗಿದ್ದರು. ಇವರ ಗೆಳೆಯರಾದ ನಾಗರಾಜ್, ಕಾರ್ತಿಕ್, ರಂಜು ಅವರು ಮತ್ತೂಂದು ಸ್ಕೂಟಿಯಲ್ಲಿ ಹೊರಟು ಬಿರಿಯಾನಿ ಪಾಯಿಂಟ್ ಗಿಂತ ಸ್ವಲ್ಪ ಮುಂದೆ ಗೂಡಂಗಡಿ ಬಳಿಗೆ ತೆರಳಿದ್ದರು. ಈ ವೇಳೆ ಪ್ರವೀಣ, ಅಭಿ ಕಟಪಾಡಿ, ದೇಶರಾಜ್, ಶಬರಿ ಮತ್ತು ಪರಿಚಯವಿಲ್ಲದ ಇತರ ಇಬ್ಬರು ಅಲ್ಲಿಯೇ ನಿಂತಿದ್ದ ರಿûಾಕ್ಕೆ ಒರಗಿಕೊಂಡು, ಕೈಯಲ್ಲಿ ತಲವಾರು ಹಿಡಿದುಕೊಂಡು ನಿಂತಿದ್ದರು.
ಚರಣ್ ಮತ್ತು ಆತನ ಗೆಳೆಯರನ್ನು ನೋಡಿದ ತತ್ಕ್ಷಣ ಕೊಲ್ಲುವ ಉದ್ದೇಶದಿಂದ ಎದುರು ಬಂದು ತಲವಾರು ಬೀಸಿದ್ದು, ಬೈಕ್ ಮತ್ತು ಸ್ಕೂಟಿಯನ್ನು ಅಲ್ಲಿಯೇ ಬಿಟ್ಟು ಅವರಿಂದ ತಪ್ಪಿಸಿಕೊಂಡು ಓಡಿ ಹೋಗುವಾಗ ಬಿಯರ್ ಬಾಟಲಿಗಳನ್ನು ಬಿಸಾಡಿದ್ದಾರೆ. ಅನಂತರ ರಾತ್ರಿ 10 ಗಂಟೆಗೆ ಚರಣ್ ಹಾಗೂ ಸ್ನೇಹಿತರು ಪುನಃ ತಾವು ಬಿಟ್ಟು ಹೋಗಿದ್ದ ಬೈಕ್ ಹಾಗೂ ಸ್ಕೂಟಿಯನ್ನು ಕೊಂಡು ಹೋಗಲು ಹೋದಾಗ ಆರೋಪಿಗಳು ಇವರ ದ್ವಿಚಕ್ರ ವಾಹನವನ್ನು ಹಾನಿಗೊಳಿಸಿ 25 ಸಾವಿರ ರೂ. ನಷ್ಟ ಉಂಟು ಮಾಡಿದ್ದಾರೆ.
ಸುಜನ್ನ ಸ್ಕೂಟಿಯನ್ನು ದೂಡಿ ಹಾಕಿದ್ದಾರೆ. ಶಬರಿ ಎಂಬವನಿಗೆ ಚರಣ್ ನಿಂದಿಸಿದ ಕಾರಣ ಮುಂದಿಟ್ಟುಕೊಂಡು, ಹಳೇ ದ್ವೇಷದಿಂದ ಪ್ರವೀಣ್ ಮತ್ತು ಇತರ 5 ಮಂದಿ ಸೇರಿ ಕೊಲ್ಲುವ ಉದ್ದೇಶದಿಂದ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ ಎಂದು ನಗರ ಠಾಣೆಯಲ್ಲಿ ಚರಣ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…