Featured

ಉಡುಪಿ: ಸೆ.15ರಂದು 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ : ಜಿಲ್ಲಾಧಿಕಾರಿ – vishwanews24

ಉಡುಪಿ: ಸೆ.15ರಂದು 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ : ಜಿಲ್ಲಾಧಿಕಾರಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು ಸಹಿತ 1 ಲಕ್ಷ ಜನರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಗಡಿಭಾಗವಾದ ಬೈಂದೂರು ಶಿರೂರಿನಿಂದ ಹೆಜಮಾಡಿ ತನಕ ಸರಪಳಿ ಇರಲಿದೆ. ಉಡುಪಿಯ ಕಿನ್ನಿಮೂಲ್ಕಿ ಸ್ವಾಗತಗೋಪುರದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಬಾವುಟ ಹಿಡಿದು ಸಂಭ್ರಮಿಸಲಿದ್ದೇವೆ. ಮೊದಲಿಗೆ ಸಂವಿಧಾನ ಪೀಠಿಕೆ ಓದಿ, ಬಳಿಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಸಂದೇಶ ಸಾರಲಾಗುತ್ತದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ ಎಂದರು.

ಸಂಚಾರದಲ್ಲಿ ಬದಲಾವಣೆ:
ಮಾನವ ಸರಪಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವುದರಿಂದ ಒಂದು ಗಂಟೆ ಕಾಲ ವಾಹನಗಳು ದ್ವಿಪಥದಲ್ಲಿ ಸಂಚರಿಸಲಿವೆ. ಉಡುಪಿಯಿಂದ ಬೈಂದೂರಿಗೆ ಹೋಗುವಾಗ ಚತುಷ್ಪಥ ರಸ್ತೆಯ ಬಲಭಾಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅಲ್ಲಿ ಮಾನವ ಸರಪಳಿ ಇರಲಿದೆ. ಸಮರ್ಥವಾಗಿ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಶಾಲಾ ಕಾಲೇಜು, ಸಂಘ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಇದನ್ನು ನಿರ್ವಹಿಸಲಿದ್ದು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರತಿ 100 ಮೀಟರ್‌ಗೆ ಓರ್ವ ಸೆಕ್ಷನ್‌ ಆಫೀಸರ್‌, ಪ್ರತಿ 1 ಕಿ.ಮೀ.ಗೆ ಓರ್ವ ಏರಿಯಾ ಆಫೀಸರ್‌, ಪ್ರತಿ 5 ಕಿ.ಮೀ.ಗೆ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರ ನಿಯೋಜನೆಯಾಗಿದೆ. ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ, ತುರ್ತು ಸೇವೆಗೆ ಆಯಂಬುಲೆನ್ಸ್‌ ಕೂಡ ಇರಲಿದೆ. ಜಿಲ್ಲೆಯ ವಿವಿಧ ಸಾಂಪ್ರದಾಯಿಕ ಕಲೆಗಳ ಅನಾವರಣವೂ ನಡೆಯಲಿದೆ. ಡ್ರೋನ್‌ ಶೂಟಿಂಗ್‌ ಮಾಡಲಿದ್ದೇವೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago