Featured

ಉಡುಪಿ: ಸೆ.15ರಂದು 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ : ಜಿಲ್ಲಾಧಿಕಾರಿ – vishwanews24

ಉಡುಪಿ: ಸೆ.15ರಂದು 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ : ಜಿಲ್ಲಾಧಿಕಾರಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು ಸಹಿತ 1 ಲಕ್ಷ ಜನರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಗಡಿಭಾಗವಾದ ಬೈಂದೂರು ಶಿರೂರಿನಿಂದ ಹೆಜಮಾಡಿ ತನಕ ಸರಪಳಿ ಇರಲಿದೆ. ಉಡುಪಿಯ ಕಿನ್ನಿಮೂಲ್ಕಿ ಸ್ವಾಗತಗೋಪುರದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಬಾವುಟ ಹಿಡಿದು ಸಂಭ್ರಮಿಸಲಿದ್ದೇವೆ. ಮೊದಲಿಗೆ ಸಂವಿಧಾನ ಪೀಠಿಕೆ ಓದಿ, ಬಳಿಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಸಂದೇಶ ಸಾರಲಾಗುತ್ತದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ ಎಂದರು.

ಸಂಚಾರದಲ್ಲಿ ಬದಲಾವಣೆ:
ಮಾನವ ಸರಪಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವುದರಿಂದ ಒಂದು ಗಂಟೆ ಕಾಲ ವಾಹನಗಳು ದ್ವಿಪಥದಲ್ಲಿ ಸಂಚರಿಸಲಿವೆ. ಉಡುಪಿಯಿಂದ ಬೈಂದೂರಿಗೆ ಹೋಗುವಾಗ ಚತುಷ್ಪಥ ರಸ್ತೆಯ ಬಲಭಾಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅಲ್ಲಿ ಮಾನವ ಸರಪಳಿ ಇರಲಿದೆ. ಸಮರ್ಥವಾಗಿ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಶಾಲಾ ಕಾಲೇಜು, ಸಂಘ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಇದನ್ನು ನಿರ್ವಹಿಸಲಿದ್ದು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರತಿ 100 ಮೀಟರ್‌ಗೆ ಓರ್ವ ಸೆಕ್ಷನ್‌ ಆಫೀಸರ್‌, ಪ್ರತಿ 1 ಕಿ.ಮೀ.ಗೆ ಓರ್ವ ಏರಿಯಾ ಆಫೀಸರ್‌, ಪ್ರತಿ 5 ಕಿ.ಮೀ.ಗೆ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರ ನಿಯೋಜನೆಯಾಗಿದೆ. ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ, ತುರ್ತು ಸೇವೆಗೆ ಆಯಂಬುಲೆನ್ಸ್‌ ಕೂಡ ಇರಲಿದೆ. ಜಿಲ್ಲೆಯ ವಿವಿಧ ಸಾಂಪ್ರದಾಯಿಕ ಕಲೆಗಳ ಅನಾವರಣವೂ ನಡೆಯಲಿದೆ. ಡ್ರೋನ್‌ ಶೂಟಿಂಗ್‌ ಮಾಡಲಿದ್ದೇವೆ ಎಂದು ತಿಳಿಸಿದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

21 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

22 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

22 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

22 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

22 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

23 hours ago