ಮಂಗಳೂರು : ರಾಜ್ಯ ಹಾಗೂ ಕೇಂದ್ರ ಪಠ್ಯಕ್ರಮದ ಶಾಲೆಗಳಿಗೆ ಸೆ. 20 ರಿಂದಲೇ ಮಧ್ಯಾವಧಿ (ದಸರಾ ರಜೆ) ಆರಂಭವಾಗಲಿದೆ. ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ (ರಾಜ್ಯ ಪಠ್ಯಕ್ರಮ) ಶಾಲೆಗಳಿಗೆ ಸೆ. 20 ರಿಂದ ದಸರಾ ರಜೆ ಆರಂಭಗೊಂಡು ಅಕ್ಟೋಬರ್ 6ರ ವರೆಗೂ ಇರಲಿದೆ. ಅ. 7ರಿಂದ ಶಾಲೆಗಳು ಪುನರ್ ಆರಂಭವಾಗಲಿದೆ.
ಅವಿಭಜಿತ ದ.ಕ. ಜಿಲ್ಲೆಯ ಸಿಬಿಎಸ್ಇ ಶಾಲೆಗಳಲ್ಲಿ ಸೆ. 20ರಿಂದ ಮಧ್ಯಾವಧಿ ರಜೆ ಆರಂಭವಾಗಿ ಅ. 2ರ ವರೆಗೂ ಇರಲಿದೆ. ಅ. 3ರಿಂದ ತರಗತಿಗಳು ಪುನಃ ಆರಂಭವಾಗಲಿದೆ. ಸಿಬಿಎಸ್ಇ ಕೆಲವು ಆಡಳಿತ ಮಂಡಳಿಗಳ ರಜಾವಧಿಯಲ್ಲಿ ಸ್ವಲ್ಪ ವ್ಯತ್ಯಾಸವೂ ಇರಬಹುದು. ದೀಪಾವಳಿ ಹಾಗೂ ಕ್ರಿಸ್ಮಸ್ ಸಂದರ್ಭದಲ್ಲಿ ಹೆಚ್ಚು ದಿನ ರಜಾ ಕೊಡುವ ಶಾಲೆಗಳು ಈ ರಜಾವಧಿಯ ಕಡಿಮೆ ಮಾಡಿಕೊಳ್ಳುವ ಪದ್ಧತಿಯೂ ಇದೆ.
ರಾಜ್ಯ ಪಠ್ಯಕ್ರಮ ಸಹಿತ ವಿವಿಧ ಪಠ್ಯಕ್ರಮದ ಕೆಲ ಶಾಲೆಗಳಲ್ಲಿ ಎಸೆಸೆಲ್ಸಿ/ ಫಲಿತಾಂಶ ಸುಧಾರಣೆಯ ದೃಷ್ಟಿಯಿಂದ ಆಯಾ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾವಧಿ ರಜಾವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸುವ ಸಾಧ್ಯತೆಯೂ ಇರುತ್ತದೆ. ವಿದ್ಯಾರ್ಥಿಗಳಿಗೆ ಅಥವಾ ವಿದ್ಯಾರ್ಥಿಗಳ ಪಾಲಕ, ಪೋಷಕರಿಗೆ ಯಾವುದೇ ಒತ್ತಡ ಆಗದ ರೀತಿಯಲ್ಲಿ ರಜಾವಧಿಯ ವಿಶೇಷ ತರಗತಿಗೆ ಯೋಜನೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…