Featured

ಉಡುಪಿ : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ – vishwanews24

ಉಡುಪಿ : ಸೆ. 20 ರಿಂದ ಶಾಲೆಗಳಿಗೆ ಮಧ್ಯಾವಧಿ ರಜೆ ಆರಂಭ

ಮಂಗಳೂರು : ರಾಜ್ಯ ಹಾಗೂ ಕೇಂದ್ರ ಪಠ್ಯಕ್ರಮದ ಶಾಲೆಗಳಿಗೆ ಸೆ. 20 ರಿಂದಲೇ ಮಧ್ಯಾವಧಿ (ದಸರಾ ರಜೆ) ಆರಂಭವಾಗಲಿದೆ. ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ (ರಾಜ್ಯ ಪಠ್ಯಕ್ರಮ) ಶಾಲೆಗಳಿಗೆ ಸೆ. 20 ರಿಂದ ದಸರಾ ರಜೆ ಆರಂಭಗೊಂಡು ಅಕ್ಟೋಬರ್‌ 6ರ ವರೆಗೂ ಇರಲಿದೆ. ಅ. 7ರಿಂದ ಶಾಲೆಗಳು ಪುನರ್‌ ಆರಂಭವಾಗಲಿದೆ.

ಅವಿಭಜಿತ ದ.ಕ. ಜಿಲ್ಲೆಯ ಸಿಬಿಎಸ್‌ಇ ಶಾಲೆಗಳಲ್ಲಿ ಸೆ. 20ರಿಂದ ಮಧ್ಯಾವಧಿ ರಜೆ ಆರಂಭವಾಗಿ ಅ. 2ರ ವರೆಗೂ ಇರಲಿದೆ. ಅ. 3ರಿಂದ ತರಗತಿಗಳು ಪುನಃ ಆರಂಭವಾಗಲಿದೆ. ಸಿಬಿಎಸ್‌ಇ ಕೆಲವು ಆಡಳಿತ ಮಂಡಳಿಗಳ ರಜಾವಧಿಯಲ್ಲಿ ಸ್ವಲ್ಪ ವ್ಯತ್ಯಾಸವೂ ಇರಬಹುದು. ದೀಪಾವಳಿ ಹಾಗೂ ಕ್ರಿಸ್ಮಸ್‌ ಸಂದರ್ಭದಲ್ಲಿ ಹೆಚ್ಚು ದಿನ ರಜಾ ಕೊಡುವ ಶಾಲೆಗಳು ಈ ರಜಾವಧಿಯ ಕಡಿಮೆ ಮಾಡಿಕೊಳ್ಳುವ ಪದ್ಧತಿಯೂ ಇದೆ.

ರಾಜ್ಯ ಪಠ್ಯಕ್ರಮ ಸಹಿತ ವಿವಿಧ ಪಠ್ಯಕ್ರಮದ ಕೆಲ ಶಾಲೆಗಳಲ್ಲಿ ಎಸೆಸೆಲ್ಸಿ/ ಫ‌ಲಿತಾಂಶ ಸುಧಾರಣೆಯ ದೃಷ್ಟಿಯಿಂದ ಆಯಾ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾವಧಿ ರಜಾವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸುವ ಸಾಧ್ಯತೆಯೂ ಇರುತ್ತದೆ. ವಿದ್ಯಾರ್ಥಿಗಳಿಗೆ ಅಥವಾ ವಿದ್ಯಾರ್ಥಿಗಳ ಪಾಲಕ, ಪೋಷಕರಿಗೆ ಯಾವುದೇ ಒತ್ತಡ ಆಗದ ರೀತಿಯಲ್ಲಿ ರಜಾವಧಿಯ ವಿಶೇಷ ತರಗತಿಗೆ ಯೋಜನೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

15 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

16 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

17 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

17 hours ago