ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಸೆ.24ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಬದುಕು ಕಸಿಯುವ ಜನ ವಿರೋಧಿ ನಿಲುವಿನಿಂದ ಕೂಡಿದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯಿಂದಾಗಿ ಜನವಸತಿ ಪ್ರದೇಶಗಳು ಪರಿಸರ ಅತೀ ಸೂಕ್ಷ್ಮ ಅರಣ್ಯ ವ್ಯಾಪ್ತಿಗೆ ಒಳಪಡುವುದರಿಂದ ಜನರಲ್ಲಿ ಆತಂಕ ಉಂಟಾಗಿದೆ. ಜಿಲ್ಲೆಯ ಸುಮಾರು 37ಕ್ಕೂ ಅಧಿಕ ಗ್ರಾಮಗಳು ಈ ವರದಿಯ ಅತೀ ಸೂಕ್ಷ್ಮ ವಲಯದ ವ್ಯಾಪ್ತಿಗೆ ಒಳಪಡುತ್ತದೆ ಎಂದರು.
ಈ ಹಿನ್ನೆಲೆಯಲ್ಲಿ ಜಡ್ಕಲ್ ಗ್ರಾಪಂನಲ್ಲಿ ಸೆ.19ರಂದು ಈ ವರದಿಯಿಂದ ಜನಜೀವನದ ಮೇಲೆ ಉಂಟಾಗುತ್ತಿರುವ ಪರಿಣಾಮದ ಗಂಭೀರತೆಯ ಸಾಧಕ ಬಾಧಕಗಳನ್ನು ಚರ್ಚಿಸಲು ವಿಶೇಷ ಗ್ರಾಮಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಪರಿಣಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ಪಡೆದು ಗ್ರಾಮ ಸಭೆಯ ನಿರ್ಣಯದಂತೆ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ಧರಣಿಯಲ್ಲಿ ಪರಿಸರವಾದಿ ಕಲ್ಕುಳಿ ವಿಠಲ ಹೆಗಡೆ, ಜನಪರ ಹೋರಾಟಗಾರ ಜಯನ್ ಮಲ್ಪೆ ಸೇರಿದಂತೆ ಅನೇಕ ಪ್ರಗತಿಪರ ಚಿಂತಕರು, ಸಮಾನ ಮನಸ್ಕರು ಹಾಗೂ ಬಾಧಿತ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಲಿ ದ್ದಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುದೂರು ಗ್ರಾಪಂ ಸದಸ್ಯ ಲಕ್ಷ್ಮಣ ಶೆಟ್ಟಿ, ಸಮಿತಿಯ ಪ್ರಮುಖರಾಜ ರಂಜಿತ್ ಎಂ.ವಿ.ಮುದೂರು, ಜಿ.ಬಿ.ಮೋಹನ್ ಜಡ್ಕಲ್, ಜೋಯ್ ವಿ.ಜೆ., ಜನಪರ ಹೋರಾಟಗಾರ ಜಯನ್ ಮಲ್ಪೆ ಉಪಸ್ಥಿತರಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…