Featured

ಉಡುಪಿ: ಸೆ.24 ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ  ಧರಣಿ – vishwanews24

ಉಡುಪಿ: ಸೆ.24 ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ  ಧರಣಿ

ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಸೆ.24ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಬದುಕು ಕಸಿಯುವ ಜನ ವಿರೋಧಿ ನಿಲುವಿನಿಂದ ಕೂಡಿದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯಿಂದಾಗಿ ಜನವಸತಿ ಪ್ರದೇಶಗಳು ಪರಿಸರ ಅತೀ ಸೂಕ್ಷ್ಮ ಅರಣ್ಯ ವ್ಯಾಪ್ತಿಗೆ ಒಳಪಡುವುದರಿಂದ ಜನರಲ್ಲಿ ಆತಂಕ ಉಂಟಾಗಿದೆ. ಜಿಲ್ಲೆಯ ಸುಮಾರು 37ಕ್ಕೂ ಅಧಿಕ ಗ್ರಾಮಗಳು ಈ ವರದಿಯ ಅತೀ ಸೂಕ್ಷ್ಮ ವಲಯದ ವ್ಯಾಪ್ತಿಗೆ ಒಳಪಡುತ್ತದೆ ಎಂದರು.

ಈ ಹಿನ್ನೆಲೆಯಲ್ಲಿ ಜಡ್ಕಲ್ ಗ್ರಾಪಂನಲ್ಲಿ ಸೆ.19ರಂದು ಈ ವರದಿಯಿಂದ ಜನಜೀವನದ ಮೇಲೆ ಉಂಟಾಗುತ್ತಿರುವ ಪರಿಣಾಮದ ಗಂಭೀರತೆಯ ಸಾಧಕ ಬಾಧಕಗಳನ್ನು ಚರ್ಚಿಸಲು ವಿಶೇಷ ಗ್ರಾಮಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಪರಿಣಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ಪಡೆದು ಗ್ರಾಮ ಸಭೆಯ ನಿರ್ಣಯದಂತೆ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಈ ಧರಣಿಯಲ್ಲಿ ಪರಿಸರವಾದಿ ಕಲ್ಕುಳಿ ವಿಠಲ ಹೆಗಡೆ, ಜನಪರ ಹೋರಾಟಗಾರ ಜಯನ್ ಮಲ್ಪೆ ಸೇರಿದಂತೆ ಅನೇಕ ಪ್ರಗತಿಪರ ಚಿಂತಕರು, ಸಮಾನ ಮನಸ್ಕರು ಹಾಗೂ ಬಾಧಿತ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಲಿ ದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುದೂರು ಗ್ರಾಪಂ ಸದಸ್ಯ ಲಕ್ಷ್ಮಣ ಶೆಟ್ಟಿ, ಸಮಿತಿಯ ಪ್ರಮುಖರಾಜ ರಂಜಿತ್ ಎಂ.ವಿ.ಮುದೂರು, ಜಿ.ಬಿ.ಮೋಹನ್ ಜಡ್ಕಲ್, ಜೋಯ್ ವಿ.ಜೆ., ಜನಪರ ಹೋರಾಟಗಾರ ಜಯನ್ ಮಲ್ಪೆ ಉಪಸ್ಥಿತರಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago