ಉಡುಪಿ : ಸೆ.29 ರಂದು ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಯಾತ್ರಾಮಂಗಲೋತ್ಸವ – vishwanews24
ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಯಾತ್ರಾಮಂಗಲೋತ್ಸವ
ಸೆ.29 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ
ಅ. 11ರಂದು “ಶ್ರೀಸೌಭಾಗ್ಯ” 8 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮುಗುತಿ ಧಾರಣೆ ಕಾರ್ಯಕ್ರಮ
ಉಡುಪಿ : ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆ ಪರಿಸಮಾಪ್ತಿಯ ಪ್ರಯುಕ್ತ ಅಷ್ಟೋತ್ತರ ಶತ ಪುಣ್ಯ ಕ್ಷೇತ್ರ ಯಾತ್ರಾಮಂಗಲೋತ್ಸವ ಇದರ ಅಂಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಸೆ.29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಸಾಯಿ ಈಶ್ವರ್ ಗುರುಜಿ ಅವರು, ಅಪಾರ ಸಂಖ್ಯೆಯ ದೇಶ ಭಕ್ತರು, ಸಾಧು-ಸಂತರು, ಯೋಧರು ಹಾಗೂ ಮಠದ ಅಭಿಮಾನಿ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದ 2 ಕಡೆ ಕಲಬೆರಕೆ ತುಪ್ಪ : ಆಹಾರ ಸುರಕ್ಷತಾ ಇಲಾಖೆ ಟೆಸ್ಟ್ ನಲ್ಲಿ ಬಹಿರಂಗ – vishwanews24
ಇದರ ಜೊತೆಗೆ ಶ್ರೀ ಸಾಯಿ ಈಶ್ವರ್ ಗುರೂಜಿ ಇವರ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಭಾಗ್ಯದಯಕ್ಕಾಗಿ ದುರ್ಗಾಷ್ಟಮಿಯ ಪ್ರಯುಕ್ತ “ಶ್ರೀಸೌಭಾಗ್ಯ’ ಎಂಬ 8 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮುಗುತಿ ಧಾರಣೆ ಕಾರ್ಯಕ್ರಮ ಅ 11ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀ ಕ್ಷೇತ್ರ ಶಂಕರಪುರಕ್ಕೆ ಬಂದು ಹೆಸರು ನೋಂದಾಯಿಸಿಕೊಳ್ಳ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7619115623, 7026293111 ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಟ್ರಸ್ಟ್ನ ಅಧ್ಯಕ್ಷರಾದ ಸುಧಾಕರ ಶೆಟ್ಟಿ, ಮಠದ ಟ್ರಸ್ಟಿ ಗೀತಾಂಜಲಿ ಎಮ್. ಸುವರ್ಣ, ವೀಣಾ ಎಸ್.ಶೆಟ್ಟಿ ಮತ್ತು ರಾಘವೇಂದ್ರ ಕರ್ವಾಲು ಉಪಸ್ಥಿತರಿದ್ದರು.
