Featured

ಉಡುಪಿ : ಸೆ.29 ರಂದು ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಯಾತ್ರಾಮಂಗಲೋತ್ಸವ – vishwanews24

ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಯಾತ್ರಾಮಂಗಲೋತ್ಸವ

ಸೆ.29 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ

ಅ. 11ರಂದು “ಶ್ರೀಸೌಭಾಗ್ಯ” 8 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮುಗುತಿ ಧಾರಣೆ ಕಾರ್ಯಕ್ರಮ

ಉಡುಪಿ : ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆ ಪರಿಸಮಾಪ್ತಿಯ ಪ್ರಯುಕ್ತ ಅಷ್ಟೋತ್ತರ ಶತ ಪುಣ್ಯ ಕ್ಷೇತ್ರ ಯಾತ್ರಾಮಂಗಲೋತ್ಸವ ಇದರ ಅಂಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಸೆ.29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಸಾಯಿ ಈಶ್ವರ್ ಗುರುಜಿ ಅವರು, ಅಪಾರ ಸಂಖ್ಯೆಯ ದೇಶ ಭಕ್ತರು, ಸಾಧು-ಸಂತರು, ಯೋಧರು ಹಾಗೂ ಮಠದ ಅಭಿಮಾನಿ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದರ ಜೊತೆಗೆ ಶ್ರೀ ಸಾಯಿ ಈಶ್ವರ್ ಗುರೂಜಿ ಇವರ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಭಾಗ್ಯದಯಕ್ಕಾಗಿ ದುರ್ಗಾಷ್ಟಮಿಯ ಪ್ರಯುಕ್ತ “ಶ್ರೀಸೌಭಾಗ್ಯ’ ಎಂಬ 8 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮುಗುತಿ ಧಾರಣೆ ಕಾರ್ಯಕ್ರಮ ಅ 11ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀ ಕ್ಷೇತ್ರ ಶಂಕರಪುರಕ್ಕೆ ಬಂದು ಹೆಸರು ನೋಂದಾಯಿಸಿಕೊಳ್ಳ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7619115623, 7026293111 ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಟ್ರಸ್ಟ್‌ನ ಅಧ್ಯಕ್ಷರಾದ ಸುಧಾಕರ ಶೆಟ್ಟಿ, ಮಠದ ಟ್ರಸ್ಟಿ ಗೀತಾಂಜಲಿ ಎಮ್. ಸುವರ್ಣ, ವೀಣಾ ಎಸ್.ಶೆಟ್ಟಿ ಮತ್ತು ರಾಘವೇಂದ್ರ ಕರ್ವಾಲು ಉಪಸ್ಥಿತರಿದ್ದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago