ಉಡುಪಿ: ವಾರದ ಹಿಂದೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗಿಲ್ಲ. ಈತ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಪುನೀತ್ (26) ನಾಪತ್ತೆಯಾದ ಯುವಕ.
ಇದೀಗ ಆತನ ಸಂಬಂಧಿಕರು ಕಾಪು ಠಾಣೆಯಲ್ಲಿ ಯುವಕ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದು ನಾಪತ್ತೆ ಪ್ರಕರಣ ದಾಖಲಾಗಿದೆ.
ಇಂದು ಬೆಳಿಗ್ಗಿನಿಂದಲೇ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ, ಮತ್ತು ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದ ಸಿಬ್ಬಂದಿ ಸೇತುವೆಯಿಂದ ಸುಮಾರು 8 ಕಿಲೋ ಮೀಟರ್ ದೂರದವರಗೆ ಹುಡುಕಾಟ ನಡೆಸಿದ್ದಾರೆ. ಆದರೂ ಯಾವುದೇ ಪ್ರಯೋಜನ ಆಗಿಲ್ಲ.
ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಸ್ಕೂಟರ್ನಲ್ಲಿ ಆತನ ಪರ್ಸ್, ಪೋನ್ ಇತ್ಯಾದಿ ಸಿಕ್ಕಿದ್ದು, ಅದರ ಆಧಾರದಲ್ಲಿ ಆತನ ಗುರುತು ಪತ್ತೆಯಾಗಿತ್ತು.
ಘಟನೆ ನಡೆದ ದಿನ ಮೃತದೇಹಕ್ಕಾಗಿ ಸಾಕಷ್ಟು ಹುಡುಕಾಟ ನಡೆಸಿದ್ದರೂ ವಿಪರೀತ ಮಳೆಯ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿ ಕೈಬಿಡಲಾಗಿತ್ತು.
ಘಟನೆ ನಡೆದು 6 ದಿನದ ಬಳಿಕವೂ ಮೃತದೇಹ ಪತ್ತೆಯಾಗಿಲ್ಲ. ನದಿ ನೀರಿನ ಹರಿವು ತೀವ್ರವಾಗಿರುವುದರಿಂದ ಕೊಚ್ಚಿಹೋಗಿರುವ ಸಾಧ್ಯತೆ ಇದೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ…
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್ನಿಂದ ರಾತ್ರಿಯಿಡೀ…