ಉಡುಪಿ: ವಾರದ ಹಿಂದೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗಿಲ್ಲ. ಈತ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಪುನೀತ್ (26) ನಾಪತ್ತೆಯಾದ ಯುವಕ.
ಇದೀಗ ಆತನ ಸಂಬಂಧಿಕರು ಕಾಪು ಠಾಣೆಯಲ್ಲಿ ಯುವಕ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದು ನಾಪತ್ತೆ ಪ್ರಕರಣ ದಾಖಲಾಗಿದೆ.
ಇಂದು ಬೆಳಿಗ್ಗಿನಿಂದಲೇ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ, ಮತ್ತು ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದ ಸಿಬ್ಬಂದಿ ಸೇತುವೆಯಿಂದ ಸುಮಾರು 8 ಕಿಲೋ ಮೀಟರ್ ದೂರದವರಗೆ ಹುಡುಕಾಟ ನಡೆಸಿದ್ದಾರೆ. ಆದರೂ ಯಾವುದೇ ಪ್ರಯೋಜನ ಆಗಿಲ್ಲ.
ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಸ್ಕೂಟರ್ನಲ್ಲಿ ಆತನ ಪರ್ಸ್, ಪೋನ್ ಇತ್ಯಾದಿ ಸಿಕ್ಕಿದ್ದು, ಅದರ ಆಧಾರದಲ್ಲಿ ಆತನ ಗುರುತು ಪತ್ತೆಯಾಗಿತ್ತು.
ಘಟನೆ ನಡೆದ ದಿನ ಮೃತದೇಹಕ್ಕಾಗಿ ಸಾಕಷ್ಟು ಹುಡುಕಾಟ ನಡೆಸಿದ್ದರೂ ವಿಪರೀತ ಮಳೆಯ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿ ಕೈಬಿಡಲಾಗಿತ್ತು.
ಘಟನೆ ನಡೆದು 6 ದಿನದ ಬಳಿಕವೂ ಮೃತದೇಹ ಪತ್ತೆಯಾಗಿಲ್ಲ. ನದಿ ನೀರಿನ ಹರಿವು ತೀವ್ರವಾಗಿರುವುದರಿಂದ ಕೊಚ್ಚಿಹೋಗಿರುವ ಸಾಧ್ಯತೆ ಇದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…