ಉಡುಪಿ: ವಾರದ ಹಿಂದೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗಿಲ್ಲ. ಈತ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಪುನೀತ್ (26) ನಾಪತ್ತೆಯಾದ ಯುವಕ.
ಇದೀಗ ಆತನ ಸಂಬಂಧಿಕರು ಕಾಪು ಠಾಣೆಯಲ್ಲಿ ಯುವಕ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದು ನಾಪತ್ತೆ ಪ್ರಕರಣ ದಾಖಲಾಗಿದೆ.
ಇಂದು ಬೆಳಿಗ್ಗಿನಿಂದಲೇ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ, ಮತ್ತು ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದ ಸಿಬ್ಬಂದಿ ಸೇತುವೆಯಿಂದ ಸುಮಾರು 8 ಕಿಲೋ ಮೀಟರ್ ದೂರದವರಗೆ ಹುಡುಕಾಟ ನಡೆಸಿದ್ದಾರೆ. ಆದರೂ ಯಾವುದೇ ಪ್ರಯೋಜನ ಆಗಿಲ್ಲ.
ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಸ್ಕೂಟರ್ನಲ್ಲಿ ಆತನ ಪರ್ಸ್, ಪೋನ್ ಇತ್ಯಾದಿ ಸಿಕ್ಕಿದ್ದು, ಅದರ ಆಧಾರದಲ್ಲಿ ಆತನ ಗುರುತು ಪತ್ತೆಯಾಗಿತ್ತು.
ಘಟನೆ ನಡೆದ ದಿನ ಮೃತದೇಹಕ್ಕಾಗಿ ಸಾಕಷ್ಟು ಹುಡುಕಾಟ ನಡೆಸಿದ್ದರೂ ವಿಪರೀತ ಮಳೆಯ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿ ಕೈಬಿಡಲಾಗಿತ್ತು.
ಘಟನೆ ನಡೆದು 6 ದಿನದ ಬಳಿಕವೂ ಮೃತದೇಹ ಪತ್ತೆಯಾಗಿಲ್ಲ. ನದಿ ನೀರಿನ ಹರಿವು ತೀವ್ರವಾಗಿರುವುದರಿಂದ ಕೊಚ್ಚಿಹೋಗಿರುವ ಸಾಧ್ಯತೆ ಇದೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…